ರಾಮಚಂದ್ರಾಪುರ ಮಠದ ಅಂಗಸಂಸ್ಥೆಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಆಶ್ರಯ

August 12, 2019
12:00 PM

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಎಲ್ಲ ಶಾಖಾಮಠಗಳು ಹಾಗೂ ಅಂಗಸಂಸ್ಥೆಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಬಳಿಯ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ಸ್ಥಾಪಿಸಲಾಗಿದ್ದು, ಪರಿಸ್ಥಿತಿಯ ತೀವ್ರತೆ ಹಿನ್ನೆಲೆಯಲ್ಲಿ ಎಲ್ಲ ಅಂಗಸಂಸ್ಥೆಗಳಿಗೆ ಈ ವ್ಯವಸ್ಥೆ ವಿಸ್ತರಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ಹೇಳಿದೆ.
ರಾಜ್ಯದಲ್ಲಿ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ, ಲಕ್ಷಾಂತರ ಜನರ ಬದುಕು ಬವಣೆಯಾಗಿದೆ. ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಬದುಕು ಕಟ್ಟಿಕೊಳ್ಳಲು ಶ್ರೀಮಠ ಸಹಾಯಹಸ್ತ ಚಾಚಿದ್ದು, ಉಚಿತವಾಗಿ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತಿತರ ಜಿಲ್ಲೆಗಳಲ್ಲಿರುವ ಶ್ರೀಮಠದ ವಿದ್ಯಾಸಂಸ್ಥೆಗಳು, ಶಾಖಾ ಮಠಗಳು, ಗೋಶಾಲೆಗಳು ಸಂತ್ರಸ್ತರಿಗೆ ಆಶ್ರಯ ನೀಡಲಿವೆ. ಈಗಾಗಲೇ ಶ್ರೀಮಠದ ಶಿಷ್ಯಭಕ್ತರು ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದು, ಇವುಗಳನ್ನು ಅಗತ್ಯವಿರುವ ಸಂತ್ರಸ್ತರಿಗೆ ವಿತರಿಸಲಾಗುವುದು.
ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಸಂತ್ರಸ್ತರಿಗೆ ಅಗತ್ಯವಿರುವ ಬೆಡ್‍ಶೀಟ್, ಟವೆಲ್, ಟಿ-ಷರ್ಟ್, ಲುಂಗಿ, ನೈಟಿ, ಟೂಥ್‍ಬ್ರೆಷ್‍ಗಳನ್ನೊಳಗೊಂಡ 500ಕ್ಕೂ ಹೆಚ್ಚು ಕಿಟ್‍ಗಳನ್ನು ಕಳುಹಿಸಲಾಗಿದೆ. ಅಗತ್ಯ ಔಷಧಿಗಳನ್ನು ಹಾಗೂ ಆಹಾರ ಸಾಮಗ್ರಿ ವಿತರಣೆಗೂ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಆಶ್ರಯ ಬಯಸುವ ನೆರೆ ಸಂತ್ರಸ್ತರು ತುರ್ತು ನೆರವಿಗಾಗಿ ಶ್ರೀಮಠದ ಯೋಜನಾಖಂಡದ ಶ್ರೀಸಂಯೋಜಕ ಪ್ರಸನ್ನ ಶಾಸ್ತ್ರಿ (09880985475) ಅಥವಾ ಲೋಕಸಂಪರ್ಕ ವಿಭಾಗದ ಶಿಶಿರ್ ಹೆಗಡೆ ಅಂಗಡಿ (9483484074) ಅವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಧನೆಗಿಂತ ದೊಡ್ಡದು ಸಂಯಮ
February 16, 2026
7:56 AM
by: ದ ರೂರಲ್ ಮಿರರ್.ಕಾಂ
ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ
February 16, 2026
7:34 AM
by: ದ ರೂರಲ್ ಮಿರರ್.ಕಾಂ
ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror