Advertisement
ಸುದ್ದಿಗಳು

ರಾಮಚಂದ್ರಾಪುರ ಮಠದ ಅಂಗಸಂಸ್ಥೆಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಆಶ್ರಯ

Share

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಎಲ್ಲ ಶಾಖಾಮಠಗಳು ಹಾಗೂ ಅಂಗಸಂಸ್ಥೆಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಬಳಿಯ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ಸ್ಥಾಪಿಸಲಾಗಿದ್ದು, ಪರಿಸ್ಥಿತಿಯ ತೀವ್ರತೆ ಹಿನ್ನೆಲೆಯಲ್ಲಿ ಎಲ್ಲ ಅಂಗಸಂಸ್ಥೆಗಳಿಗೆ ಈ ವ್ಯವಸ್ಥೆ ವಿಸ್ತರಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ಹೇಳಿದೆ.
ರಾಜ್ಯದಲ್ಲಿ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ, ಲಕ್ಷಾಂತರ ಜನರ ಬದುಕು ಬವಣೆಯಾಗಿದೆ. ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಬದುಕು ಕಟ್ಟಿಕೊಳ್ಳಲು ಶ್ರೀಮಠ ಸಹಾಯಹಸ್ತ ಚಾಚಿದ್ದು, ಉಚಿತವಾಗಿ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತಿತರ ಜಿಲ್ಲೆಗಳಲ್ಲಿರುವ ಶ್ರೀಮಠದ ವಿದ್ಯಾಸಂಸ್ಥೆಗಳು, ಶಾಖಾ ಮಠಗಳು, ಗೋಶಾಲೆಗಳು ಸಂತ್ರಸ್ತರಿಗೆ ಆಶ್ರಯ ನೀಡಲಿವೆ. ಈಗಾಗಲೇ ಶ್ರೀಮಠದ ಶಿಷ್ಯಭಕ್ತರು ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದು, ಇವುಗಳನ್ನು ಅಗತ್ಯವಿರುವ ಸಂತ್ರಸ್ತರಿಗೆ ವಿತರಿಸಲಾಗುವುದು.
ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಸಂತ್ರಸ್ತರಿಗೆ ಅಗತ್ಯವಿರುವ ಬೆಡ್‍ಶೀಟ್, ಟವೆಲ್, ಟಿ-ಷರ್ಟ್, ಲುಂಗಿ, ನೈಟಿ, ಟೂಥ್‍ಬ್ರೆಷ್‍ಗಳನ್ನೊಳಗೊಂಡ 500ಕ್ಕೂ ಹೆಚ್ಚು ಕಿಟ್‍ಗಳನ್ನು ಕಳುಹಿಸಲಾಗಿದೆ. ಅಗತ್ಯ ಔಷಧಿಗಳನ್ನು ಹಾಗೂ ಆಹಾರ ಸಾಮಗ್ರಿ ವಿತರಣೆಗೂ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಆಶ್ರಯ ಬಯಸುವ ನೆರೆ ಸಂತ್ರಸ್ತರು ತುರ್ತು ನೆರವಿಗಾಗಿ ಶ್ರೀಮಠದ ಯೋಜನಾಖಂಡದ ಶ್ರೀಸಂಯೋಜಕ ಪ್ರಸನ್ನ ಶಾಸ್ತ್ರಿ (09880985475) ಅಥವಾ ಲೋಕಸಂಪರ್ಕ ವಿಭಾಗದ ಶಿಶಿರ್ ಹೆಗಡೆ ಅಂಗಡಿ (9483484074) ಅವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

5 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

7 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

19 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

19 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago