Advertisement
ಸುದ್ದಿಗಳು

ರಾಮಚಂದ್ರಾಪುರ ಮಠದ ಅಂಗಸಂಸ್ಥೆಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಆಶ್ರಯ

Share

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಎಲ್ಲ ಶಾಖಾಮಠಗಳು ಹಾಗೂ ಅಂಗಸಂಸ್ಥೆಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಬಳಿಯ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ಸ್ಥಾಪಿಸಲಾಗಿದ್ದು, ಪರಿಸ್ಥಿತಿಯ ತೀವ್ರತೆ ಹಿನ್ನೆಲೆಯಲ್ಲಿ ಎಲ್ಲ ಅಂಗಸಂಸ್ಥೆಗಳಿಗೆ ಈ ವ್ಯವಸ್ಥೆ ವಿಸ್ತರಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ಹೇಳಿದೆ.
ರಾಜ್ಯದಲ್ಲಿ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ, ಲಕ್ಷಾಂತರ ಜನರ ಬದುಕು ಬವಣೆಯಾಗಿದೆ. ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಬದುಕು ಕಟ್ಟಿಕೊಳ್ಳಲು ಶ್ರೀಮಠ ಸಹಾಯಹಸ್ತ ಚಾಚಿದ್ದು, ಉಚಿತವಾಗಿ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತಿತರ ಜಿಲ್ಲೆಗಳಲ್ಲಿರುವ ಶ್ರೀಮಠದ ವಿದ್ಯಾಸಂಸ್ಥೆಗಳು, ಶಾಖಾ ಮಠಗಳು, ಗೋಶಾಲೆಗಳು ಸಂತ್ರಸ್ತರಿಗೆ ಆಶ್ರಯ ನೀಡಲಿವೆ. ಈಗಾಗಲೇ ಶ್ರೀಮಠದ ಶಿಷ್ಯಭಕ್ತರು ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದು, ಇವುಗಳನ್ನು ಅಗತ್ಯವಿರುವ ಸಂತ್ರಸ್ತರಿಗೆ ವಿತರಿಸಲಾಗುವುದು.
ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಸಂತ್ರಸ್ತರಿಗೆ ಅಗತ್ಯವಿರುವ ಬೆಡ್‍ಶೀಟ್, ಟವೆಲ್, ಟಿ-ಷರ್ಟ್, ಲುಂಗಿ, ನೈಟಿ, ಟೂಥ್‍ಬ್ರೆಷ್‍ಗಳನ್ನೊಳಗೊಂಡ 500ಕ್ಕೂ ಹೆಚ್ಚು ಕಿಟ್‍ಗಳನ್ನು ಕಳುಹಿಸಲಾಗಿದೆ. ಅಗತ್ಯ ಔಷಧಿಗಳನ್ನು ಹಾಗೂ ಆಹಾರ ಸಾಮಗ್ರಿ ವಿತರಣೆಗೂ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಆಶ್ರಯ ಬಯಸುವ ನೆರೆ ಸಂತ್ರಸ್ತರು ತುರ್ತು ನೆರವಿಗಾಗಿ ಶ್ರೀಮಠದ ಯೋಜನಾಖಂಡದ ಶ್ರೀಸಂಯೋಜಕ ಪ್ರಸನ್ನ ಶಾಸ್ತ್ರಿ (09880985475) ಅಥವಾ ಲೋಕಸಂಪರ್ಕ ವಿಭಾಗದ ಶಿಶಿರ್ ಹೆಗಡೆ ಅಂಗಡಿ (9483484074) ಅವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

17 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

18 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

19 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago