Advertisement
MIRROR FOCUS

ರಾಷ್ಟ್ರಮಟ್ಟ ತಲುಪಿದ ಕಂಬಳ ಓಟಗಾರ ಶ್ರೀನಿವಾಸ್ ಗೌಡ

Share

ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಯುವಕ ಶ್ರೀನಿವಾಸಗೌಡ ಅವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
Advertisement

ಉಪರಾಷ್ಟ್ರಪತಿಗಳ ಅಧಿಕೃತ ಟ್ವೀಟ್ ಖಾತೆಯಿಂದ ಬರೆದಿರುವ ವೆಂಕಯ್ಯ ನಾಯ್ಡು, ‘ಕಂಬಳ ಕ್ರೀಡೆಯಲ್ಲಿ ಅಪರೂಪದ ಸಾಧನೆ ಮಾಡಿರುವ ಹಾಗೂ ಉಸೇನ್ ಬೋಲ್ಟ್ ಅವರ ಸಾಧನೆಯೊಂದಿಗೆ ಹೋಲಿಕೆಯಾಗುತ್ತಿರುವ ಶ್ರೀನಿವಾಸ್ ಗೌಡ ಅವರಿಗೆ ಅಭಿನಂದನೆಗಳು. ದೇಶದಲ್ಲಿ ಸುಪ್ತವಾಗಿರುವ ಹಲವಾರು ಪ್ರತಿಭೆಗಳಿವೆ. ಅದನ್ನು ಗುರುತಿಸಿ, ಪೋಷಿಸಿ ಸಂಪೂರ್ಣವಾದ ಸಾಮರ್ಥ್ಯವನ್ನು ಹೊರತರುವ ಅಗತ್ಯವಿದೆ’ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಅಲ್ಲದೆ ಶ್ರೀನಿವಾಸರ ಪ್ರತಿಭೆಯನ್ನು ಗುರುತಿಸಿ, ಒಲಿಂಪಿಕ್ಸ್ ಗೆ ಅವರ ಕೌಶಲವನ್ನು ಅಣಿಗೊಳಿಸಲು ತರಬೇತಿ ನೀಡುವುದಾಗಿ ತಿಳಿಸಿರುವ ಕೇಂದ್ರ ಕ್ರೀಡಾ ಸಚಿವ ಕಿರೆಣ್ ರಿಜಿಜು ಅವರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ಕರೆ (ಕಂಬಳ ಕೋಣಗಳ ಟ್ರ್ಯಾಕ್) ಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗುತ್ತಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

9 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

9 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

9 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

10 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

10 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

10 hours ago