Advertisement
MIRROR FOCUS

ರಾಷ್ಟ್ರಮಟ್ಟ ತಲುಪಿದ ಕಂಬಳ ಓಟಗಾರ ಶ್ರೀನಿವಾಸ್ ಗೌಡ

Share

ಮಂಗಳೂರು: ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಯುವಕ ಶ್ರೀನಿವಾಸಗೌಡ ಅವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಪರಾಷ್ಟ್ರಪತಿಗಳ ಅಧಿಕೃತ ಟ್ವೀಟ್ ಖಾತೆಯಿಂದ ಬರೆದಿರುವ ವೆಂಕಯ್ಯ ನಾಯ್ಡು, ‘ಕಂಬಳ ಕ್ರೀಡೆಯಲ್ಲಿ ಅಪರೂಪದ ಸಾಧನೆ ಮಾಡಿರುವ ಹಾಗೂ ಉಸೇನ್ ಬೋಲ್ಟ್ ಅವರ ಸಾಧನೆಯೊಂದಿಗೆ ಹೋಲಿಕೆಯಾಗುತ್ತಿರುವ ಶ್ರೀನಿವಾಸ್ ಗೌಡ ಅವರಿಗೆ ಅಭಿನಂದನೆಗಳು. ದೇಶದಲ್ಲಿ ಸುಪ್ತವಾಗಿರುವ ಹಲವಾರು ಪ್ರತಿಭೆಗಳಿವೆ. ಅದನ್ನು ಗುರುತಿಸಿ, ಪೋಷಿಸಿ ಸಂಪೂರ್ಣವಾದ ಸಾಮರ್ಥ್ಯವನ್ನು ಹೊರತರುವ ಅಗತ್ಯವಿದೆ’ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಅಲ್ಲದೆ ಶ್ರೀನಿವಾಸರ ಪ್ರತಿಭೆಯನ್ನು ಗುರುತಿಸಿ, ಒಲಿಂಪಿಕ್ಸ್ ಗೆ ಅವರ ಕೌಶಲವನ್ನು ಅಣಿಗೊಳಿಸಲು ತರಬೇತಿ ನೀಡುವುದಾಗಿ ತಿಳಿಸಿರುವ ಕೇಂದ್ರ ಕ್ರೀಡಾ ಸಚಿವ ಕಿರೆಣ್ ರಿಜಿಜು ಅವರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಫೆ. 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ತುಳುನಾಡಿನ ಸಾಂಪ್ರದಾಯಿಕ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ ಅವರು 142.50 ಮೀಟರ್ ಕರೆ (ಕಂಬಳ ಕೋಣಗಳ ಟ್ರ್ಯಾಕ್) ಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಶ್ರೀನಿವಾಸ ಗೌಡ ಅವರನ್ನು ಉಸೇನ್ ಬೋಲ್ಟ್ ಜೊತೆಗೆ ಹೋಲಿಸಲಾಗುತ್ತಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

4 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

5 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

18 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago