Advertisement
ಜಿಲ್ಲೆ

ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ ರಮಾನಾಥ್ ರೈ ಭೇಟಿ

Share

ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ  ಭೇಟಿ ನೀಡಿದರು.

ಗೇರು ತೋಟದ ಬೆಳೆಸುವಿಕೆ, ತಳಿ ಗುಣಧರ್ಮಗಳು, ಭೂಮಿ ತಯಾರಿ, ಗೊಬ್ಬರ ಮತ್ತು ಕೀಟ, ರೋಗ ನಿರ್ವಹಣೆ ಮತ್ತು ಮಾರುಕಟ್ಟೆಯ ಬಗ್ಗೆ ಮಾಹಿತಿ ಪಡೆದರು. ಹೊಸ ಹೈಬ್ರಿಡ್ ತಳಿಯಾದ ಹೆಚ್-130 ಬಗ್ಗೆ ಮಾಹಿತಿ ಪಡೆದು ಅದರ ಗುಣಧರ್ಮಗಳ ಮತ್ತು ನಿರ್ವಹಣೆ ಬಗ್ಗೆ ಬಹಳ ಆಸಕ್ತಿಯಿಂದ ಆಲಿಸಿದರು. ಜೊತೆಗೆ ಘನಸಾಂದ್ರ ಪದ್ಧತಿ ಕೃಷಿಯ ಬಗ್ಗೆ ವಿಚಾರಿಸಿ ಮೂರು ಎಕರೆ ಜಾಗದಲ್ಲಿ ಕೃಷಿ ಮಾಡುವ ಬಗ್ಗೆ ಮಾಹಿತಿ ಪಡೆದು ಗಿಡಗಳನ್ನು ತೆಗೆದುಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದರು.ಬಳಿಕ ಕೊಯಿಲಿನ ನಂತರ ಸಂಸ್ಕರಣೆ ಹಾಗೂ ಗೇರು ಹಣ್ಣಿನ ಉಪಯೋಗದ ಬಗ್ಗೆ ಮಾಹಿತಿ ಪಡೆದರು. ಗೇರು ಹಣ್ಣಿನಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಅಂದರೆ ಜ್ಯೂಸ್, ಜಾಮ್, ಜೆಲ್ಲಿ, ಕುರ್ಕುರೆ, ಮೌತ್ ಫ್ರೆಶ್ನೆರ್ ಮುಂತಾದ ತಯಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ಬೆಳವಣಿಗೆ ಹಾಗೂ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕರಾದ ಡಾ. ಎಂ.ಜಿ. ನಾಯಕ್, ವಿಜ್ಞಾನಿಗಳಾದ ಡಾ. ಶಂಸುದ್ದೀನ್, ಡಾ. ಪ್ರೀತಿಯವರು ಹಾಜರಿದ್ದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ನೇಮಾಶ್ವ ಸುವರ್ಣ ಮತ್ತಿತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

9 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

15 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

19 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

23 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago