Advertisement
ಜಿಲ್ಲೆ

ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ ರಮಾನಾಥ್ ರೈ ಭೇಟಿ

Share

ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ  ಭೇಟಿ ನೀಡಿದರು.

Advertisement

ಗೇರು ತೋಟದ ಬೆಳೆಸುವಿಕೆ, ತಳಿ ಗುಣಧರ್ಮಗಳು, ಭೂಮಿ ತಯಾರಿ, ಗೊಬ್ಬರ ಮತ್ತು ಕೀಟ, ರೋಗ ನಿರ್ವಹಣೆ ಮತ್ತು ಮಾರುಕಟ್ಟೆಯ ಬಗ್ಗೆ ಮಾಹಿತಿ ಪಡೆದರು. ಹೊಸ ಹೈಬ್ರಿಡ್ ತಳಿಯಾದ ಹೆಚ್-130 ಬಗ್ಗೆ ಮಾಹಿತಿ ಪಡೆದು ಅದರ ಗುಣಧರ್ಮಗಳ ಮತ್ತು ನಿರ್ವಹಣೆ ಬಗ್ಗೆ ಬಹಳ ಆಸಕ್ತಿಯಿಂದ ಆಲಿಸಿದರು. ಜೊತೆಗೆ ಘನಸಾಂದ್ರ ಪದ್ಧತಿ ಕೃಷಿಯ ಬಗ್ಗೆ ವಿಚಾರಿಸಿ ಮೂರು ಎಕರೆ ಜಾಗದಲ್ಲಿ ಕೃಷಿ ಮಾಡುವ ಬಗ್ಗೆ ಮಾಹಿತಿ ಪಡೆದು ಗಿಡಗಳನ್ನು ತೆಗೆದುಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದರು.ಬಳಿಕ ಕೊಯಿಲಿನ ನಂತರ ಸಂಸ್ಕರಣೆ ಹಾಗೂ ಗೇರು ಹಣ್ಣಿನ ಉಪಯೋಗದ ಬಗ್ಗೆ ಮಾಹಿತಿ ಪಡೆದರು. ಗೇರು ಹಣ್ಣಿನಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಅಂದರೆ ಜ್ಯೂಸ್, ಜಾಮ್, ಜೆಲ್ಲಿ, ಕುರ್ಕುರೆ, ಮೌತ್ ಫ್ರೆಶ್ನೆರ್ ಮುಂತಾದ ತಯಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ಬೆಳವಣಿಗೆ ಹಾಗೂ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕರಾದ ಡಾ. ಎಂ.ಜಿ. ನಾಯಕ್, ವಿಜ್ಞಾನಿಗಳಾದ ಡಾ. ಶಂಸುದ್ದೀನ್, ಡಾ. ಪ್ರೀತಿಯವರು ಹಾಜರಿದ್ದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ನೇಮಾಶ್ವ ಸುವರ್ಣ ಮತ್ತಿತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

5 minutes ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

11 minutes ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

13 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

19 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

24 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

24 hours ago