ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದರು.
ಗೇರು ತೋಟದ ಬೆಳೆಸುವಿಕೆ, ತಳಿ ಗುಣಧರ್ಮಗಳು, ಭೂಮಿ ತಯಾರಿ, ಗೊಬ್ಬರ ಮತ್ತು ಕೀಟ, ರೋಗ ನಿರ್ವಹಣೆ ಮತ್ತು ಮಾರುಕಟ್ಟೆಯ ಬಗ್ಗೆ ಮಾಹಿತಿ ಪಡೆದರು. ಹೊಸ ಹೈಬ್ರಿಡ್ ತಳಿಯಾದ ಹೆಚ್-130 ಬಗ್ಗೆ ಮಾಹಿತಿ ಪಡೆದು ಅದರ ಗುಣಧರ್ಮಗಳ ಮತ್ತು ನಿರ್ವಹಣೆ ಬಗ್ಗೆ ಬಹಳ ಆಸಕ್ತಿಯಿಂದ ಆಲಿಸಿದರು. ಜೊತೆಗೆ ಘನಸಾಂದ್ರ ಪದ್ಧತಿ ಕೃಷಿಯ ಬಗ್ಗೆ ವಿಚಾರಿಸಿ ಮೂರು ಎಕರೆ ಜಾಗದಲ್ಲಿ ಕೃಷಿ ಮಾಡುವ ಬಗ್ಗೆ ಮಾಹಿತಿ ಪಡೆದು ಗಿಡಗಳನ್ನು ತೆಗೆದುಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದರು.ಬಳಿಕ ಕೊಯಿಲಿನ ನಂತರ ಸಂಸ್ಕರಣೆ ಹಾಗೂ ಗೇರು ಹಣ್ಣಿನ ಉಪಯೋಗದ ಬಗ್ಗೆ ಮಾಹಿತಿ ಪಡೆದರು. ಗೇರು ಹಣ್ಣಿನಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಅಂದರೆ ಜ್ಯೂಸ್, ಜಾಮ್, ಜೆಲ್ಲಿ, ಕುರ್ಕುರೆ, ಮೌತ್ ಫ್ರೆಶ್ನೆರ್ ಮುಂತಾದ ತಯಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ಬೆಳವಣಿಗೆ ಹಾಗೂ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕರಾದ ಡಾ. ಎಂ.ಜಿ. ನಾಯಕ್, ವಿಜ್ಞಾನಿಗಳಾದ ಡಾ. ಶಂಸುದ್ದೀನ್, ಡಾ. ಪ್ರೀತಿಯವರು ಹಾಜರಿದ್ದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ನೇಮಾಶ್ವ ಸುವರ್ಣ ಮತ್ತಿತರು ಉಪಸ್ಥಿತರಿದ್ದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…