Advertisement
ಜಿಲ್ಲೆ

ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ ರಮಾನಾಥ್ ರೈ ಭೇಟಿ

Share

ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ  ಭೇಟಿ ನೀಡಿದರು.

Advertisement
Advertisement
Advertisement
Advertisement

ಗೇರು ತೋಟದ ಬೆಳೆಸುವಿಕೆ, ತಳಿ ಗುಣಧರ್ಮಗಳು, ಭೂಮಿ ತಯಾರಿ, ಗೊಬ್ಬರ ಮತ್ತು ಕೀಟ, ರೋಗ ನಿರ್ವಹಣೆ ಮತ್ತು ಮಾರುಕಟ್ಟೆಯ ಬಗ್ಗೆ ಮಾಹಿತಿ ಪಡೆದರು. ಹೊಸ ಹೈಬ್ರಿಡ್ ತಳಿಯಾದ ಹೆಚ್-130 ಬಗ್ಗೆ ಮಾಹಿತಿ ಪಡೆದು ಅದರ ಗುಣಧರ್ಮಗಳ ಮತ್ತು ನಿರ್ವಹಣೆ ಬಗ್ಗೆ ಬಹಳ ಆಸಕ್ತಿಯಿಂದ ಆಲಿಸಿದರು. ಜೊತೆಗೆ ಘನಸಾಂದ್ರ ಪದ್ಧತಿ ಕೃಷಿಯ ಬಗ್ಗೆ ವಿಚಾರಿಸಿ ಮೂರು ಎಕರೆ ಜಾಗದಲ್ಲಿ ಕೃಷಿ ಮಾಡುವ ಬಗ್ಗೆ ಮಾಹಿತಿ ಪಡೆದು ಗಿಡಗಳನ್ನು ತೆಗೆದುಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದರು.ಬಳಿಕ ಕೊಯಿಲಿನ ನಂತರ ಸಂಸ್ಕರಣೆ ಹಾಗೂ ಗೇರು ಹಣ್ಣಿನ ಉಪಯೋಗದ ಬಗ್ಗೆ ಮಾಹಿತಿ ಪಡೆದರು. ಗೇರು ಹಣ್ಣಿನಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಅಂದರೆ ಜ್ಯೂಸ್, ಜಾಮ್, ಜೆಲ್ಲಿ, ಕುರ್ಕುರೆ, ಮೌತ್ ಫ್ರೆಶ್ನೆರ್ ಮುಂತಾದ ತಯಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ಬೆಳವಣಿಗೆ ಹಾಗೂ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕರಾದ ಡಾ. ಎಂ.ಜಿ. ನಾಯಕ್, ವಿಜ್ಞಾನಿಗಳಾದ ಡಾ. ಶಂಸುದ್ದೀನ್, ಡಾ. ಪ್ರೀತಿಯವರು ಹಾಜರಿದ್ದು ಮಾಹಿತಿ ನೀಡಿದರು.

Advertisement

ಈ ಸಂದರ್ಭದಲ್ಲಿ  ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ನೇಮಾಶ್ವ ಸುವರ್ಣ ಮತ್ತಿತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

11 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

11 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

11 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

11 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

11 hours ago