Advertisement
ಜಿಲ್ಲೆ

ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ ರಮಾನಾಥ್ ರೈ ಭೇಟಿ

Share

ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ  ಭೇಟಿ ನೀಡಿದರು.

Advertisement
Advertisement

ಗೇರು ತೋಟದ ಬೆಳೆಸುವಿಕೆ, ತಳಿ ಗುಣಧರ್ಮಗಳು, ಭೂಮಿ ತಯಾರಿ, ಗೊಬ್ಬರ ಮತ್ತು ಕೀಟ, ರೋಗ ನಿರ್ವಹಣೆ ಮತ್ತು ಮಾರುಕಟ್ಟೆಯ ಬಗ್ಗೆ ಮಾಹಿತಿ ಪಡೆದರು. ಹೊಸ ಹೈಬ್ರಿಡ್ ತಳಿಯಾದ ಹೆಚ್-130 ಬಗ್ಗೆ ಮಾಹಿತಿ ಪಡೆದು ಅದರ ಗುಣಧರ್ಮಗಳ ಮತ್ತು ನಿರ್ವಹಣೆ ಬಗ್ಗೆ ಬಹಳ ಆಸಕ್ತಿಯಿಂದ ಆಲಿಸಿದರು. ಜೊತೆಗೆ ಘನಸಾಂದ್ರ ಪದ್ಧತಿ ಕೃಷಿಯ ಬಗ್ಗೆ ವಿಚಾರಿಸಿ ಮೂರು ಎಕರೆ ಜಾಗದಲ್ಲಿ ಕೃಷಿ ಮಾಡುವ ಬಗ್ಗೆ ಮಾಹಿತಿ ಪಡೆದು ಗಿಡಗಳನ್ನು ತೆಗೆದುಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದರು.ಬಳಿಕ ಕೊಯಿಲಿನ ನಂತರ ಸಂಸ್ಕರಣೆ ಹಾಗೂ ಗೇರು ಹಣ್ಣಿನ ಉಪಯೋಗದ ಬಗ್ಗೆ ಮಾಹಿತಿ ಪಡೆದರು. ಗೇರು ಹಣ್ಣಿನಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಅಂದರೆ ಜ್ಯೂಸ್, ಜಾಮ್, ಜೆಲ್ಲಿ, ಕುರ್ಕುರೆ, ಮೌತ್ ಫ್ರೆಶ್ನೆರ್ ಮುಂತಾದ ತಯಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ಬೆಳವಣಿಗೆ ಹಾಗೂ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕರಾದ ಡಾ. ಎಂ.ಜಿ. ನಾಯಕ್, ವಿಜ್ಞಾನಿಗಳಾದ ಡಾ. ಶಂಸುದ್ದೀನ್, ಡಾ. ಪ್ರೀತಿಯವರು ಹಾಜರಿದ್ದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ನೇಮಾಶ್ವ ಸುವರ್ಣ ಮತ್ತಿತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

3 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

3 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

13 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

13 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

13 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

14 hours ago