ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿರುವ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದರು.
ಗೇರು ತೋಟದ ಬೆಳೆಸುವಿಕೆ, ತಳಿ ಗುಣಧರ್ಮಗಳು, ಭೂಮಿ ತಯಾರಿ, ಗೊಬ್ಬರ ಮತ್ತು ಕೀಟ, ರೋಗ ನಿರ್ವಹಣೆ ಮತ್ತು ಮಾರುಕಟ್ಟೆಯ ಬಗ್ಗೆ ಮಾಹಿತಿ ಪಡೆದರು. ಹೊಸ ಹೈಬ್ರಿಡ್ ತಳಿಯಾದ ಹೆಚ್-130 ಬಗ್ಗೆ ಮಾಹಿತಿ ಪಡೆದು ಅದರ ಗುಣಧರ್ಮಗಳ ಮತ್ತು ನಿರ್ವಹಣೆ ಬಗ್ಗೆ ಬಹಳ ಆಸಕ್ತಿಯಿಂದ ಆಲಿಸಿದರು. ಜೊತೆಗೆ ಘನಸಾಂದ್ರ ಪದ್ಧತಿ ಕೃಷಿಯ ಬಗ್ಗೆ ವಿಚಾರಿಸಿ ಮೂರು ಎಕರೆ ಜಾಗದಲ್ಲಿ ಕೃಷಿ ಮಾಡುವ ಬಗ್ಗೆ ಮಾಹಿತಿ ಪಡೆದು ಗಿಡಗಳನ್ನು ತೆಗೆದುಕೊಳ್ಳುವ ಆಸಕ್ತಿ ವ್ಯಕ್ತಪಡಿಸಿದರು.ಬಳಿಕ ಕೊಯಿಲಿನ ನಂತರ ಸಂಸ್ಕರಣೆ ಹಾಗೂ ಗೇರು ಹಣ್ಣಿನ ಉಪಯೋಗದ ಬಗ್ಗೆ ಮಾಹಿತಿ ಪಡೆದರು. ಗೇರು ಹಣ್ಣಿನಿಂದ ತಯಾರಿಸಿದ ವಿವಿಧ ಉತ್ಪನ್ನಗಳು ಅಂದರೆ ಜ್ಯೂಸ್, ಜಾಮ್, ಜೆಲ್ಲಿ, ಕುರ್ಕುರೆ, ಮೌತ್ ಫ್ರೆಶ್ನೆರ್ ಮುಂತಾದ ತಯಾರಿಗಳನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು. ಸಂಸ್ಥೆಯ ಬೆಳವಣಿಗೆ ಹಾಗೂ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ದೇಶಕರಾದ ಡಾ. ಎಂ.ಜಿ. ನಾಯಕ್, ವಿಜ್ಞಾನಿಗಳಾದ ಡಾ. ಶಂಸುದ್ದೀನ್, ಡಾ. ಪ್ರೀತಿಯವರು ಹಾಜರಿದ್ದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ನೇಮಾಶ್ವ ಸುವರ್ಣ ಮತ್ತಿತರು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…