ಕೃಷಿ

ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ಸಂಸ್ಥಾಪನಾ ದಿನಾಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಐಸಿಎಆರ್-ಗೇರು ಸಂಶೋಧನಾ ನಿರ್ದೇಶನಾಲಯ, ಪುತ್ತೂರು ತನ್ನ 33 ನೇ ಸಂಸ್ಥಾಪನಾ ದಿನವನ್ನು  ಆಚರಿಸಿತು.

Advertisement

ಈ ಸಂದರ್ಭ  ಕೇಂದ್ರ ಸರ್ಕಾರದಿಂದ ನಿರ್ದೇಶನಾಲಯಕ್ಕೆ ಮಂಜೂರಾದ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕೊಡುವ ಅನುದಾನದ ಯೋಜನೆಯನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಸಕ ಸಂಜೀವ ಮಠಂದೂರು ಸಾಂಕೇತಿಕವಾಗಿ ಗಿಡ ಕೊಡುವುದರ ಮೂಲಕ ಚಾಲನೆ ನೀಡಿದರು ಬಳಿಕ ಮಾತನಾಡಿದ ಅವರು , ಭಾರತೀಯ ಸಮಾಜದಲ್ಲಿ ಕೃಷಿಯ ಪಾತ್ರ ಮತ್ತು ಬದಲಾಗುತ್ತಿರುವ ದೇಶದ ಕೃಷಿ ಸನ್ನಿವೇಶದ ಬಗ್ಗೆ ಮಾತನಾಡಿದರು.

ಅತಿಥಿಯಾಗಿ ಭಾಗವಹಿಸಿದ ಕೊಚ್ಚಿಯ ಕೊಕೊ ಮತ್ತು ಗೋಡಂಬಿ ಅಭಿವೃದ್ಧಿ ನಿರ್ದೇಶನಾಲಯದ (ಡಿಸಿಸಿಡಿ) ನಿರ್ದೇಶಕ ವೆಂಕಟೇಶ್ ಹುಬ್ಬಳ್ಳಿ, ಗೋಡಂಬಿ ಜನಪ್ರಿಯಗೊಳಿಸುವಿಕೆ ಮತ್ತು ಸಾಂಪ್ರದಾಯಿಕವಲ್ಲದ ಗೋಡಂಬಿ ಬೆಳೆಯುವ ಪ್ರದೇಶಗಳಿಗೆ ಅದರ ಪ್ರದೇಶ ವಿಸ್ತರಣೆಗಾಗಿ ಡಿಸಿಸಿಡಿಯ ಕಾರ್ಯಕ್ರಮಗಳ ಕುರಿತು ಮಾತನಾಡಿದರು.

ಕರ್ನಾಟಕದ ಗೇರು ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ನಟೇಲ್ಕರ್ ಮಾತನಾಡಿ ದೇಶದ ಗೋಡಂಬಿ ಕೃಷಿಕರ ಸಾಮಾಜಿಕ-ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸಲು ವರ್ಷಗಳಲ್ಲಿ ಮಾಡಿದ ಸಾಧನೆಗಳಿಗಾಗಿ ನಿರ್ದೇಶನಾಲಯವನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಗೋಡಂಬಿ ಕೃಷಿ ಕುರಿತು ಆರು ಪ್ರಕಟಣೆಗಳನ್ನು ಬಿಡುಗಡೆ ಮಾಡಲಾಯಿತು. ಕೋಲಾರ ಜಿಲ್ಲೆಯಲ್ಲಿ ಗೋಡಂಬಿ ಬೆಳೆಯುತ್ತಿರುವ ಪ್ರಗತಿಪರ ರೈತ ಕೆ.ನಾಗರಾಜ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ನಬಾರ್ಡ್ ಬ್ಯಾಂಕಿನ ಸಹಾಯಕ ಪ್ರಬಂಧಕರಾದ ಎಸ್. ರಮೇಶ್,  “ರೈತ ಉತ್ಪಾದಕ ಕಂಪನಿಗಳ ರಚನೆಯಲ್ಲಿ ನಬಾರ್ಡ್ನ ಪಾತ್ರ” ಕುರಿತು ಉಪನ್ಯಾಸ ನೀಡಿದರು.

ವಿಟ್ಲದ ರೈತ ಉತ್ಪಾದಕ ಕಂಪನಿ ‘ಪಿಂಗಾರ’ದ ನಿರ್ದೇಶಕರಾದ ರಾಮ್ ಕಿಶೋರ್ ಮಂಚಿ, ಬಾಳೆಹಣ್ಣು ಮತ್ತು ಜಾಕ್ಫ್ರೂಟ್ನಂತಹ ಮೌಲ್ಯವರ್ಧಿತ ಉತ್ಪನ್ನಗಳ ಉತ್ಪಾದನೆಗಾಗಿ ರೈತ ಉತ್ಪಾದಕ ಕಂಪನಿಗಳ ರಚನೆ ಮತ್ತು ನಡೆಸುತ್ತಿರುವ ಅನುಭವಗಳನ್ನು ಹಂಚಿಕೊಂಡರು.

ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ  ಶಿವಪ್ರಕಾಶ್,  ರೈತ ಉತ್ಪಾದಕ ಕಂಪನಿ (ಎಫ್ಪಿಒ)ಗಳನ್ನು ರಚಿಸುವುದಕ್ಕಾಗಿ ರೈತರಿಗೆ ನೀಡುವ ಪ್ರೋತ್ಸಾಹದ ಕುರಿತು ಮಾಹಿತಿ ಕೊಟ್ಟರು.

ಈ ಸಂದರ್ಭದಲ್ಲಿ ದೇವಿಪ್ರಸಾದ್ ಕಲ್ಲಾಜೆ, ಪುಣಚದ ಗೇರು ಕೃಷಿಕ ಅವರು ತಮ್ಮ ರೈತ ಸ್ನೇಹಿತರೊಂದಿಗೆ ಎಫ್ಪಿಒ ರಚನೆ ಮಾಡುವಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಗೇರು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ. ಎಂ.ಜಿ.ನಾಯಕ್ ಸ್ವಾಗತಿಸಿ ನಿರ್ದೇಶನಾಲಯದ ತಾಂತ್ರಿಕ ಅಧಿಕಾರಿ ಪ್ರಕಾಶ್ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

24 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

1 day ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 days ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago