ಸುಳ್ಯ: ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಶಿಯಲ್ ಆರ್ಟ್ಸ್ ಅಧೀನದಲ್ಲಿ ಆಲ್ ಇಂಡಿಯಾ ಶಿಟೋರ್ಯು ಕರಾಟೆ ಡು ಯೂನಿಯನ್ ವತಿಯಿಂದ ಹಂಪನಕಟ್ಟೆಯ ಮಿಲಾಗ್ರಿಸ್ ಸಿಬಿಎಸ್ಇ ಶಾಲೆಯಲ್ಲಿ ನ.16,17 ರಂದು ನಡೆದ 12 ನೆಯ ವರ್ಷದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಫರ್ದೆಯಲ್ಲಿ ಸುಳ್ಯ ಐಪಿಎಸ್ ಶಾಲೆಯ ಎಂಟನೆಯ ತರಗತಿಯ ವಿದ್ಯಾರ್ಥಿ ಅಹ್ಮದ್ ಖಲೀಲ್ ಇಂಡಿವಿಜುವಲ್ ಕುಮಿಟಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಮತ್ತು ಇಂಡಿವಿಜುವಲ್ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.
ಈತ ಮೂರು ವರ್ಷಗಳ ಹಿಂದೆ ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಷಿಪ್ ಸ್ಫರ್ದೆಯಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತನಾಗಿರುವ ವಿದ್ಯಾರ್ಥಿಯಾಗಿರುತ್ತಾನೆ.
ಈತ ಸುಳ್ಯದಲ್ಲಿ ಉದ್ಯಮಿಯಾಗಿರುವ ಎಂ ಎಂ ಟ್ರೇಡರ್ಸ್ ಮಾಲಕ ಮಜೀದ್ ನಾವೂರು ಮತ್ತು ಸೈನಾ ದಂಪತಿಗಳ ಪುತ್ರ. ಕರಾಟೆ ಮಾಸ್ಟರ್ ಚಂದ್ರಶೇಖರ್ ಕನಕಮಜಲುರವರ ಶಿಷ್ಯ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…