Advertisement
ಸುದ್ದಿಗಳು

ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಲ್ಸೂರು ಸಮೀಪ ಅಡ್ಕಾರಿನಲ್ಲಿ ಭೀಕರ ಅಪಘಾತ- ಮೂರು ಸಾವು

Share

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಶುಕ್ರವಾರ ಸಂಜೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಇನ್ನೋವ ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮೂರು ಮಂದಿ ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಪುತ್ತೂರು ಕಬಕದ ಮಹಮ್ಮದ್ ಸಾದಿಕ್(31), ಕೆದಿಲ ಕಂಪ ನಿವಾಸಿ ಮಜೀದ್(32), ಸುನೈನ(16) ಮೃತಪಟ್ಟವರು. ಕಾರಿನಲ್ಲಿದ್ದ ಸಾಲ್ವಿನ್ ಫಾರಿಕ್(10), ಮಹಮ್ಮದ್ ಜಕುವಾನ(14) ಮತ್ತು ಅಬೂಬಕ್ಕರ್(40) ಗಾಯಗೊಂಡವರು. ಕಾಸರಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಕೇರಳ ರಸ್ತೆ ಸಾರಿಗೆ ಬಸ್ ಮತ್ತು ಸುಳ್ಯದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿನ ಮಧ್ಯೆ ಶುಕ್ರವಾರ ಸಂಜೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗಜ್ಜಾಗಿದ್ದು ಗಂಭೀರ ಗಾಯಗೊಂಡ ಸಾದಿಕ್ ಮತ್ತು ಮಜೀದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡವರಿಗೆ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಯಿತು. ಗಂಭೀರ ಗಾಯಗೊಂಡ ಸುನೈನಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾದರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ಸತೀಶ್‍ಕುಮಾರ್, ಎಸ್‍ಐ ಎಂ.ಆರ್.ಹರೀಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement
Advertisement
Advertisement
Advertisement
Advertisement

ಇಬ್ಬರ ಮದುವೆ ನಿಶ್ಚಿತವಾಗಿತ್ತು.
ಸಂಬಂಧಿಕರಾದ ಸಾಧಿಕ್ ಮತ್ತು ಮಜೀದ್ ಅವರ ಇಬ್ಬರ ಮದುವೆ ನಿಶ್ಚಿತವಾಗಿತ್ತು. ಮದುವೆಗೆ ಸಂಬಂಧಿಕರಿಗೆ ಆಮಂತ್ರಣ ನೀಡಲೆಂದು ಮಡಿಕೇರಿ, ಸುಳ್ಯಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

Advertisement

ವಾರದಲ್ಲಿ ಒಂದೇ ಜಾಗದಲ್ಲಿ ಎರಡನೇ ಅಪಘಾತ:
ಅಡ್ಕಾರ್ ಮಾವಿನಕಟ್ಟೆಯಲ್ಲಿ ವಾರದಲ್ಲಿ ಉಂಟಾದ ಎರಡನೇ ಭೀಕರ ಅಪಘಾತ ಇದಾಗಿದೆ. ಇದೇ ಸ್ಥಳದಲ್ಲಿ ಕಳೆದ ವಾರ ಕಾರು ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಕೊಡಗು ನಾಪೊಕ್ಲು ಕೊಟ್ಟಮುಡಿಯ ನಾಲ್ಕು ಮಂದಿ ಮೃತಪಟ್ಟಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

4 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago