Advertisement
Political mirror

ರಿಯಾಝ್ ಕಟ್ಟೆಕ್ಕಾರ್ ಚುನಾವಣಾ ಪ್ರಚಾರ ಆರಂಭ

Share
ಸುಳ್ಯ: ನಗರ ಪಂಚಾಯತ್ ಬೂಡು ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಿಯಾಝ್ ಕಟ್ಟೆಕ್ಕಾರ್ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಮನೆ ಮನೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರನ್ನೂ ಭೇಟಿ ಮಾಡಿ ಮತ ಕೇಳುವುದು ಇವರ ಪ್ರಚಾರ ತಂತ್ರ. ಕಳೆದ ಒಂದು ವರ್ಷದಿಂದ ಬೂಡು ವಾರ್ಡ್ ನ ಜನರ ಪ್ರತಿಯೊಂದು ಅಗತ್ಯತೆಗಳಿಗೂ ಸ್ಪಂದಿಸುತ್ತಾ ಜನ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಆದುದರಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಸಿಗದಕ್ಕೆ ಬೇಷರ ಇಲ್ಲ. 13 ಸಾವಿರಕ್ಕೂ ಹೆಚ್ಚು ಮತದಾರರಿರುವ ನಗರ ಪಂಚಯತ್ ನಲ್ಲಿ 20 ಮಂದಿಗೆ ಮಾತ್ರ ಪಕ್ಷಕ್ಕೆ ಸೀಟ್ ನೀಡಲು ಸಾಧ್ಯ. ಅದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಬೂಡು ವಾರ್ಡ್ ನ ಜನರ ಒತ್ತಾಯದ ಮೇರೆಗೆ ಪಕ್ಷೇತರನಾಗಿ ಜನರ ಅಭ್ಯರ್ಥಿಯಾಗಿ  ಸ್ಪರ್ಧಿಸುತ್ತಿದ್ದೇನೆ. ಕಳೆದ ಒಂದು ವರುಷದಿಂದ ಮಾಡಿರುವ ಜನ ಸೇವೆಯನ್ನು ಗುರುತಿಸಿ ವಾರ್ಡ್ ನ ಹಲವು ಮಂದಿ ಹಿರಿಯರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. ಹಿರಿಯರ ಮತ್ತು ವಾರ್ಡ್ ನಜನರ ಆಶೀರ್ವಾದದಿಂದ ಅಭ್ಯರ್ಥಿಯಾಗಿದ್ದೇನೆ. ಆದುದರಿಂದ ಗೆಲುವಿನ ವಿಶ್ವಾಸ ವಿದೆ ಎಂದು ‘ಸುಳ್ಯನ್ಯೂಸ್.ಕಾಂ’ ನೊಂದಿಗೆ ಮಾತನಾಡುತ್ತಾ ಅವರು ಹೇಳಿದರು.  ಇಲ್ಲಿನ ಮೂಲಭೂತ ಅಗತ್ಯತೆಗಳನ್ನು ಪೂರೈಸುವುದರೊಂದಿಗೆ ಬೂಡು ವಾರ್ಡ್ ನ  ಸರ್ವತೋಮುಖ ಅಭಿವೃದ್ಧಿ ತನ್ನ ಗುರಿ ಎಂದು ಅವರು ಹೇಳಿದ್ದಾರೆ.
ಸಾಮಾನ್ಯವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮಧ್ಯೆ ನೇರ ಸ್ಪರ್ಧೆ ಏರ್ಪಡುತ್ತಿದ್ದ ಬೂಡು ವಾರ್ಡ್ ನಲ್ಲಿ ರಿಯಾಝ್ ಕಟ್ಟೆಕ್ಕಾರ್ ಪಕ್ಷೇತರನಾಗಿ ಎಂಟ್ರಿ ಕೊಟ್ಟಿರುವುದರಿಂದ ಈ ಬಾರಿ ತ್ರಿಕೋನ ಸ್ಪರ್ಧೆ ಯ ರಂಗು ಉಂಟಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

9 minutes ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

28 minutes ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

9 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

24 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

24 hours ago