“ರೀ ಬಿಲ್ಡ್ ಕೊಡಗು” ಯೋಜನೆಯಡಿ ರೋಟರಿಯಿಂದ 25 ಮನೆಗಳ ನಿರ್ಮಾಣ

June 19, 2019
1:00 PM

ಮಡಿಕೇರಿ:ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ ರೋಟರಿ ಜಿಲ್ಲೆ 3181 ನಿಂದ “ರೀ ಬಿಲ್ಡ್ ಕೊಡಗು” ಯೋಜನೆಯಡಿ ನಿರ್ಮಿಸಲಾದ 25 ಮನೆಗಳನ್ನು ಜಲಪ್ರಳಯ ಸಂತ್ರಸ್ಥರಿಗೆ ಹಸ್ತಾಂತರಿಸಲಾಯಿತು. 3 ತಿಂಗಳಲ್ಲಿ 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟು ಸುಮಾರು 1.25 ಕೋಟಿ ರೂಪಾಯಿ ಖರ್ಚಾಗಿದೆ.

Advertisement

ಮನೆಗಳನ್ನು ಹಸ್ತಾಂತರಿಸಿದ ಅಂತರರಾಷ್ಟ್ರೀಯ ರೋಟರಿಯ ಮಾಜಿ ಅಧ್ಯಕ್ಷ ಕಲ್ಯಾಣ್ ಬ್ಯಾನರ್ಜಿ, ” ಭಾರತದಲ್ಲಿ ಹಲವಾರು ಮಂದಿಗೆ ಇನ್ನೂ ಸೂರು ದೊರಕಿಲ್ಲ. ಭಾರತದ ಅನೇಕ ನಗರಗಳ ರಸ್ತೆ ಬದಿಯಲ್ಲಿಯೇ ಜನ ರಾತ್ರಿ ಆಶ್ರಯ ಪಡೆಯುತ್ತಿರುವ ದೃಶ್ಯ ಮರೆಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸೂರಿಲ್ಲದವರನ್ನು ಗುರುತಿಸಿ ಮನೆ ನಿರ್ಮಿಸಿಕೊಡುವ ಕಾರ್ಯಕ್ಕೆ ರೋಟರಿ ಮುಂದಾಗಬೇಕೆಂದು ಹೇಳಿದರು.

ರೋಟರಿ ಜಿಲ್ಲಾ ಗವರ್ನ ರ್ ಪಿ.ರೋಹಿನಾಥ್ ಮಾತನಾಡಿ, ಕೊಡಗಿನಲ್ಲಿ ಜಲಪ್ರಳಯ ಸಂಭವಿಸಿದಾಗ ಸಂತ್ರಸ್ಥರಿಗೆ ಅಗತ್ಯವಿದ್ದ ಮನೆ ನಿರ್ಮಾಣಕ್ಕೆ ರೋಟರಿ ಜಿಲ್ಲೆ 3181 ಮುಂದಾಯಿತು. ಕೇವಲ 3 ತಿಂಗಳಲ್ಲಿ 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಂತ್ರಸ್ಥರಿಗೆ ಯೋಗ್ಯ ಮನೆಗಳನ್ನು ನಿಗಥಿತ ಅವಧಿಯಲ್ಲಿಯೇ ನೀಡಿದ ತೃಪ್ತಿ ತನಗಿದೆ ಎಂದರು.

ರೋಟರಿಗಾಗಿ ಮನೆಗಳನ್ನು ನಿರ್ಮಿಸಿಕೊಟ್ಟ ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ಧೇಶಕ ರಾಜನ್ ಸ್ಯಾಮುವೆಲ್ ಮಾತನಾಡಿ, ಭಾರತದಲ್ಲಿ ಶೇ. 40 ರಷ್ಟು ಜನರು ವಿಕೋಪ ವಿಕೋಪ ಸಂಭವಿಸಿದಾಗ ಸಂತ್ರಸ್ಥರಾಗುತ್ತಾರೆ. ಕೊಡಗಿನಲ್ಲಿ ರೋಟರಿ ಸಂಸ್ಥೆ ವತಿಯಿಂದ ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯು 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದು 10 ಕುಟುಂಬಗಳಲ್ಲಿ ಮಹಿಳೆಯರೇ ನಿರ್ವಹಿಸುತ್ತಿದ್ದು ಐವರು ವಿಧವೆಯರೂ ಮನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು.

ರೋಟರಿಯ ರೀಬಿಲ್ಡ್ ಕೊಡಗು ಯೋಜನೆಯ ಅಧ್ಯಕ್ಷ ಡಾ.ರವಿಅಪ್ಪಾಜಿ ಮಾತನಾಡಿ, 1 ಬೆಡ್ ರೂಮ್, ಅಡುಗೆ ಕೋಣೆ, 1 ಹಾಲ್, ಶೌಚಾಲಯವನ್ನು ಹೊಂದಿರುವ 320 ಚದರ ಅಡಿ ವಿಸ್ತೀರ್ಣದ ತಲಾ 5 ಲಕ್ಷ ರೂಪಾಯಿ ವೆಚ್ಚವಾಗಿರುವ ಮನೆಗಳಿಗೆ ಮಾಚ್9 28 ರಿಂದ ಕಾಮಗಾರಿ ಪ್ರಾರಂಭಿಸಲಾಗಿದ್ದು ಕೇವಲ 3 ತಿಂಗಳಲ್ಲಿ ಮನೆ ನಿರ್ಮಿಸಿ ಫಲಾನುಭವಿಗಳಿಗೆ ಮಳೆಗಾಲಕ್ಕೂ ಮುನ್ನ ನೀಡಿದ ತೃಪ್ತಿಯಿದೆ ಎಂದರು. ಈವರೆಗೂ 1.26 ಕೋಟಿ ರು. ದೇಶವಿದೇಶಗಳಿಂದ ರೀಬಿಲ್ಡ್ ಕೊಡಗು ಯೋಜನೆಯ ಮನೆ ನಿರ್ಮಾಣಕ್ಕಾಗಿ ಲಭಿಸಿದೆ ಎಂದರು.

 

 

ರೋಟರಿ ಮಾಜಿ ಗವರ್ನರ್ ಕೃಷ್ಣ ಶೆಟ್ಟಿ , ರೋಟರಿ ಜಿಲ್ಲೆ 3182 ನ ಗವರ್ನರ್ ಅಭಿನಂದನ್ ಶೆಟ್ಟಿ , ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ಲತಾ ಮಾತನಾಡಿದರು.

ರೋಟರಿಯು ನೀಡಿದ್ದ ಭರವಸೆಯಂತೆ 3 ತಿಂಗಳಲ್ಲಿ ಸಂತ್ರಸ್ಥರಿಗೆ ತಮ್ಮೂರಿನಲ್ಲಿ ಮನೆ ನಿಮಿ9ಸಿಕೊಟ್ಟಿದೆ ಎಂದು ಅಭಿನಂದಿಸಿದರು.

ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಗಳಾದ ಡಾ.ನಾಗಾರ್ಜುನ್, ದೇವದಾಸರೈ, ಮಾತಂಡ ಸುರೇಶ್ ಚಂಗಪ್ಪ, ಆರ್.ಕೃಷ್ಣ, ನಾಗೇಂದ್ರಪ್ರಸಾದ್, ಮುಂದಿನ ಸಾಲಿನ ರೋಟರಿ ಗವರ್ನರ್ ಜ್ಯೊಸೆಫ್ ಮ್ಯಾಥ್ಯು, ನಿಯೋಜಿತ ಗವರ್ನರ್ ರಂಗನಾಥ ಭಟ್ ಹಾಜರಿದ್ದರು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror