ಜಿಲ್ಲೆ

“ರೀ ಬಿಲ್ಡ್ ಕೊಡಗು” ಯೋಜನೆಯಡಿ ರೋಟರಿಯಿಂದ 25 ಮನೆಗಳ ನಿರ್ಮಾಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ:ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ ರೋಟರಿ ಜಿಲ್ಲೆ 3181 ನಿಂದ “ರೀ ಬಿಲ್ಡ್ ಕೊಡಗು” ಯೋಜನೆಯಡಿ ನಿರ್ಮಿಸಲಾದ 25 ಮನೆಗಳನ್ನು ಜಲಪ್ರಳಯ ಸಂತ್ರಸ್ಥರಿಗೆ ಹಸ್ತಾಂತರಿಸಲಾಯಿತು. 3 ತಿಂಗಳಲ್ಲಿ 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟು ಸುಮಾರು 1.25 ಕೋಟಿ ರೂಪಾಯಿ ಖರ್ಚಾಗಿದೆ.

Advertisement
Advertisement

ಮನೆಗಳನ್ನು ಹಸ್ತಾಂತರಿಸಿದ ಅಂತರರಾಷ್ಟ್ರೀಯ ರೋಟರಿಯ ಮಾಜಿ ಅಧ್ಯಕ್ಷ ಕಲ್ಯಾಣ್ ಬ್ಯಾನರ್ಜಿ, ” ಭಾರತದಲ್ಲಿ ಹಲವಾರು ಮಂದಿಗೆ ಇನ್ನೂ ಸೂರು ದೊರಕಿಲ್ಲ. ಭಾರತದ ಅನೇಕ ನಗರಗಳ ರಸ್ತೆ ಬದಿಯಲ್ಲಿಯೇ ಜನ ರಾತ್ರಿ ಆಶ್ರಯ ಪಡೆಯುತ್ತಿರುವ ದೃಶ್ಯ ಮರೆಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸೂರಿಲ್ಲದವರನ್ನು ಗುರುತಿಸಿ ಮನೆ ನಿರ್ಮಿಸಿಕೊಡುವ ಕಾರ್ಯಕ್ಕೆ ರೋಟರಿ ಮುಂದಾಗಬೇಕೆಂದು ಹೇಳಿದರು.

ರೋಟರಿ ಜಿಲ್ಲಾ ಗವರ್ನ ರ್ ಪಿ.ರೋಹಿನಾಥ್ ಮಾತನಾಡಿ, ಕೊಡಗಿನಲ್ಲಿ ಜಲಪ್ರಳಯ ಸಂಭವಿಸಿದಾಗ ಸಂತ್ರಸ್ಥರಿಗೆ ಅಗತ್ಯವಿದ್ದ ಮನೆ ನಿರ್ಮಾಣಕ್ಕೆ ರೋಟರಿ ಜಿಲ್ಲೆ 3181 ಮುಂದಾಯಿತು. ಕೇವಲ 3 ತಿಂಗಳಲ್ಲಿ 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಂತ್ರಸ್ಥರಿಗೆ ಯೋಗ್ಯ ಮನೆಗಳನ್ನು ನಿಗಥಿತ ಅವಧಿಯಲ್ಲಿಯೇ ನೀಡಿದ ತೃಪ್ತಿ ತನಗಿದೆ ಎಂದರು.

ರೋಟರಿಗಾಗಿ ಮನೆಗಳನ್ನು ನಿರ್ಮಿಸಿಕೊಟ್ಟ ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ಧೇಶಕ ರಾಜನ್ ಸ್ಯಾಮುವೆಲ್ ಮಾತನಾಡಿ, ಭಾರತದಲ್ಲಿ ಶೇ. 40 ರಷ್ಟು ಜನರು ವಿಕೋಪ ವಿಕೋಪ ಸಂಭವಿಸಿದಾಗ ಸಂತ್ರಸ್ಥರಾಗುತ್ತಾರೆ. ಕೊಡಗಿನಲ್ಲಿ ರೋಟರಿ ಸಂಸ್ಥೆ ವತಿಯಿಂದ ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯು 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದು 10 ಕುಟುಂಬಗಳಲ್ಲಿ ಮಹಿಳೆಯರೇ ನಿರ್ವಹಿಸುತ್ತಿದ್ದು ಐವರು ವಿಧವೆಯರೂ ಮನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು.

ರೋಟರಿಯ ರೀಬಿಲ್ಡ್ ಕೊಡಗು ಯೋಜನೆಯ ಅಧ್ಯಕ್ಷ ಡಾ.ರವಿಅಪ್ಪಾಜಿ ಮಾತನಾಡಿ, 1 ಬೆಡ್ ರೂಮ್, ಅಡುಗೆ ಕೋಣೆ, 1 ಹಾಲ್, ಶೌಚಾಲಯವನ್ನು ಹೊಂದಿರುವ 320 ಚದರ ಅಡಿ ವಿಸ್ತೀರ್ಣದ ತಲಾ 5 ಲಕ್ಷ ರೂಪಾಯಿ ವೆಚ್ಚವಾಗಿರುವ ಮನೆಗಳಿಗೆ ಮಾಚ್9 28 ರಿಂದ ಕಾಮಗಾರಿ ಪ್ರಾರಂಭಿಸಲಾಗಿದ್ದು ಕೇವಲ 3 ತಿಂಗಳಲ್ಲಿ ಮನೆ ನಿರ್ಮಿಸಿ ಫಲಾನುಭವಿಗಳಿಗೆ ಮಳೆಗಾಲಕ್ಕೂ ಮುನ್ನ ನೀಡಿದ ತೃಪ್ತಿಯಿದೆ ಎಂದರು. ಈವರೆಗೂ 1.26 ಕೋಟಿ ರು. ದೇಶವಿದೇಶಗಳಿಂದ ರೀಬಿಲ್ಡ್ ಕೊಡಗು ಯೋಜನೆಯ ಮನೆ ನಿರ್ಮಾಣಕ್ಕಾಗಿ ಲಭಿಸಿದೆ ಎಂದರು.

Advertisement

 

 

ರೋಟರಿ ಮಾಜಿ ಗವರ್ನರ್ ಕೃಷ್ಣ ಶೆಟ್ಟಿ , ರೋಟರಿ ಜಿಲ್ಲೆ 3182 ನ ಗವರ್ನರ್ ಅಭಿನಂದನ್ ಶೆಟ್ಟಿ , ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ಲತಾ ಮಾತನಾಡಿದರು.

ರೋಟರಿಯು ನೀಡಿದ್ದ ಭರವಸೆಯಂತೆ 3 ತಿಂಗಳಲ್ಲಿ ಸಂತ್ರಸ್ಥರಿಗೆ ತಮ್ಮೂರಿನಲ್ಲಿ ಮನೆ ನಿಮಿ9ಸಿಕೊಟ್ಟಿದೆ ಎಂದು ಅಭಿನಂದಿಸಿದರು.

Advertisement

ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಗಳಾದ ಡಾ.ನಾಗಾರ್ಜುನ್, ದೇವದಾಸರೈ, ಮಾತಂಡ ಸುರೇಶ್ ಚಂಗಪ್ಪ, ಆರ್.ಕೃಷ್ಣ, ನಾಗೇಂದ್ರಪ್ರಸಾದ್, ಮುಂದಿನ ಸಾಲಿನ ರೋಟರಿ ಗವರ್ನರ್ ಜ್ಯೊಸೆಫ್ ಮ್ಯಾಥ್ಯು, ನಿಯೋಜಿತ ಗವರ್ನರ್ ರಂಗನಾಥ ಭಟ್ ಹಾಜರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

7 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

8 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

11 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

11 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

12 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago