Advertisement
ಜಿಲ್ಲೆ

“ರೀ ಬಿಲ್ಡ್ ಕೊಡಗು” ಯೋಜನೆಯಡಿ ರೋಟರಿಯಿಂದ 25 ಮನೆಗಳ ನಿರ್ಮಾಣ

Share

ಮಡಿಕೇರಿ:ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ ರೋಟರಿ ಜಿಲ್ಲೆ 3181 ನಿಂದ “ರೀ ಬಿಲ್ಡ್ ಕೊಡಗು” ಯೋಜನೆಯಡಿ ನಿರ್ಮಿಸಲಾದ 25 ಮನೆಗಳನ್ನು ಜಲಪ್ರಳಯ ಸಂತ್ರಸ್ಥರಿಗೆ ಹಸ್ತಾಂತರಿಸಲಾಯಿತು. 3 ತಿಂಗಳಲ್ಲಿ 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟು ಸುಮಾರು 1.25 ಕೋಟಿ ರೂಪಾಯಿ ಖರ್ಚಾಗಿದೆ.

Advertisement

ಮನೆಗಳನ್ನು ಹಸ್ತಾಂತರಿಸಿದ ಅಂತರರಾಷ್ಟ್ರೀಯ ರೋಟರಿಯ ಮಾಜಿ ಅಧ್ಯಕ್ಷ ಕಲ್ಯಾಣ್ ಬ್ಯಾನರ್ಜಿ, ” ಭಾರತದಲ್ಲಿ ಹಲವಾರು ಮಂದಿಗೆ ಇನ್ನೂ ಸೂರು ದೊರಕಿಲ್ಲ. ಭಾರತದ ಅನೇಕ ನಗರಗಳ ರಸ್ತೆ ಬದಿಯಲ್ಲಿಯೇ ಜನ ರಾತ್ರಿ ಆಶ್ರಯ ಪಡೆಯುತ್ತಿರುವ ದೃಶ್ಯ ಮರೆಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸೂರಿಲ್ಲದವರನ್ನು ಗುರುತಿಸಿ ಮನೆ ನಿರ್ಮಿಸಿಕೊಡುವ ಕಾರ್ಯಕ್ಕೆ ರೋಟರಿ ಮುಂದಾಗಬೇಕೆಂದು ಹೇಳಿದರು.

ರೋಟರಿ ಜಿಲ್ಲಾ ಗವರ್ನ ರ್ ಪಿ.ರೋಹಿನಾಥ್ ಮಾತನಾಡಿ, ಕೊಡಗಿನಲ್ಲಿ ಜಲಪ್ರಳಯ ಸಂಭವಿಸಿದಾಗ ಸಂತ್ರಸ್ಥರಿಗೆ ಅಗತ್ಯವಿದ್ದ ಮನೆ ನಿರ್ಮಾಣಕ್ಕೆ ರೋಟರಿ ಜಿಲ್ಲೆ 3181 ಮುಂದಾಯಿತು. ಕೇವಲ 3 ತಿಂಗಳಲ್ಲಿ 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಂತ್ರಸ್ಥರಿಗೆ ಯೋಗ್ಯ ಮನೆಗಳನ್ನು ನಿಗಥಿತ ಅವಧಿಯಲ್ಲಿಯೇ ನೀಡಿದ ತೃಪ್ತಿ ತನಗಿದೆ ಎಂದರು.

ರೋಟರಿಗಾಗಿ ಮನೆಗಳನ್ನು ನಿರ್ಮಿಸಿಕೊಟ್ಟ ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ಧೇಶಕ ರಾಜನ್ ಸ್ಯಾಮುವೆಲ್ ಮಾತನಾಡಿ, ಭಾರತದಲ್ಲಿ ಶೇ. 40 ರಷ್ಟು ಜನರು ವಿಕೋಪ ವಿಕೋಪ ಸಂಭವಿಸಿದಾಗ ಸಂತ್ರಸ್ಥರಾಗುತ್ತಾರೆ. ಕೊಡಗಿನಲ್ಲಿ ರೋಟರಿ ಸಂಸ್ಥೆ ವತಿಯಿಂದ ಹ್ಯಾಬಿಟೇಟ್ ಫಾರ್ ಹ್ಯುಮ್ಯಾನಿಟಿ ಇಂಡಿಯಾ ಸಂಸ್ಥೆಯು 25 ಮನೆಗಳನ್ನು ತಲಾ 5 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದು 10 ಕುಟುಂಬಗಳಲ್ಲಿ ಮಹಿಳೆಯರೇ ನಿರ್ವಹಿಸುತ್ತಿದ್ದು ಐವರು ವಿಧವೆಯರೂ ಮನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು.

ರೋಟರಿಯ ರೀಬಿಲ್ಡ್ ಕೊಡಗು ಯೋಜನೆಯ ಅಧ್ಯಕ್ಷ ಡಾ.ರವಿಅಪ್ಪಾಜಿ ಮಾತನಾಡಿ, 1 ಬೆಡ್ ರೂಮ್, ಅಡುಗೆ ಕೋಣೆ, 1 ಹಾಲ್, ಶೌಚಾಲಯವನ್ನು ಹೊಂದಿರುವ 320 ಚದರ ಅಡಿ ವಿಸ್ತೀರ್ಣದ ತಲಾ 5 ಲಕ್ಷ ರೂಪಾಯಿ ವೆಚ್ಚವಾಗಿರುವ ಮನೆಗಳಿಗೆ ಮಾಚ್9 28 ರಿಂದ ಕಾಮಗಾರಿ ಪ್ರಾರಂಭಿಸಲಾಗಿದ್ದು ಕೇವಲ 3 ತಿಂಗಳಲ್ಲಿ ಮನೆ ನಿರ್ಮಿಸಿ ಫಲಾನುಭವಿಗಳಿಗೆ ಮಳೆಗಾಲಕ್ಕೂ ಮುನ್ನ ನೀಡಿದ ತೃಪ್ತಿಯಿದೆ ಎಂದರು. ಈವರೆಗೂ 1.26 ಕೋಟಿ ರು. ದೇಶವಿದೇಶಗಳಿಂದ ರೀಬಿಲ್ಡ್ ಕೊಡಗು ಯೋಜನೆಯ ಮನೆ ನಿರ್ಮಾಣಕ್ಕಾಗಿ ಲಭಿಸಿದೆ ಎಂದರು.

 

 

ರೋಟರಿ ಮಾಜಿ ಗವರ್ನರ್ ಕೃಷ್ಣ ಶೆಟ್ಟಿ , ರೋಟರಿ ಜಿಲ್ಲೆ 3182 ನ ಗವರ್ನರ್ ಅಭಿನಂದನ್ ಶೆಟ್ಟಿ , ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ಲತಾ ಮಾತನಾಡಿದರು.

ರೋಟರಿಯು ನೀಡಿದ್ದ ಭರವಸೆಯಂತೆ 3 ತಿಂಗಳಲ್ಲಿ ಸಂತ್ರಸ್ಥರಿಗೆ ತಮ್ಮೂರಿನಲ್ಲಿ ಮನೆ ನಿಮಿ9ಸಿಕೊಟ್ಟಿದೆ ಎಂದು ಅಭಿನಂದಿಸಿದರು.

ರೋಟರಿ ಜಿಲ್ಲೆಯ ಮಾಜಿ ಗವರ್ನರ್ ಗಳಾದ ಡಾ.ನಾಗಾರ್ಜುನ್, ದೇವದಾಸರೈ, ಮಾತಂಡ ಸುರೇಶ್ ಚಂಗಪ್ಪ, ಆರ್.ಕೃಷ್ಣ, ನಾಗೇಂದ್ರಪ್ರಸಾದ್, ಮುಂದಿನ ಸಾಲಿನ ರೋಟರಿ ಗವರ್ನರ್ ಜ್ಯೊಸೆಫ್ ಮ್ಯಾಥ್ಯು, ನಿಯೋಜಿತ ಗವರ್ನರ್ ರಂಗನಾಥ ಭಟ್ ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

2 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago