ಸವಿರುಚಿ

ರುಚಿ ರುಚಿ….. ಹುರುಳಿ ವೈವಿಧ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹುರುಳಿ ಚಟ್ನಿ:

Advertisement
Advertisement

ಬೇಕಾಗುವ ಸಾಮಾನು: 1/2 ಕಪ್ ಹುರುಳಿ, ಅರ್ಧ ಹೋಳು ತೆಂಗಿನಕಾಯಿ, ಒಣಮೆಣಸು 6, ಹುಣಿಸೆಹಣ್ಣು ಸಣ್ಣ ನೆಲ್ಲಿ ಗಾತ್ರ, ರುಚಿಗೆ ತಕ್ಕಷ್ಟು ಉಪ್ಪು. ಒಗ್ಗರಣೆಗೆ ಸಾಸಿವೆ, ಮೆಣಸಿನಕಾಯಿ, ಕರಿಬೇವು. ಎಣ್ಣೆ.

ಮಾಡುವ ವಿಧಾನ: ಹುರುಳಿಯನ್ನು ಎಣ್ಣೆ ಹಾಕದೆ ಹುರಿಯಿರಿ. ಮೆಣಸಿನಕಾಯಿಯನ್ನು ಎಣ್ಣೆ ಹಾಕಿ ಹುರಿಯಿರಿ. ತೆಂಗಿನತುರಿ, ಹುಣಿಸೆಹಣ್ಣು, ಉಪ್ಪು, ಹುರಿದ ಮೆಣಸಿನಕಾಯಿ ಮತ್ತು ಹುರುಳಿಯನ್ನು ಗಟ್ಟಿಯಾಗಿ ರುಬ್ಬಿಕೊಂಡು ಅದಕ್ಕೆ ಸಾಸಿವೆ ಒಗ್ಗರಣೆ ಹಾಕಿದರೆ ರುಚಿಯಾದ ಹುರುಳಿ ಚಟ್ನಿ ತಯಾರು.

ಹುರುಳಿ ಸಾರು:

ಬೇಕಾಗುವ ಸಾಮಾನು: 1 ಕಪ್ ಹುರುಳಿ , ತೆಂಗಿನ ತುರಿ 1 ಟೇಬಲ್ ಚಮಚ, ಕೊತ್ತಂಬರಿ, 5 ಒಣ ಮೆಣಸಿನಕಾಯಿ, 1ಗೆಡ್ಡೆ ಬೆಳ್ಳುಳ್ಳಿ , ನೆಲ್ಲಿಕಾಯಿ ಗಾತ್ರ ಹುಣಿಸೆಹಣ್ಣು, ಬೆಲ್ಲ , ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ: ಹುರುಳಿಯನ್ನು ಬೇಯಿಸಿ ಬಸಿದ ನೀರಿಗೆ ಹುಣಿಸೆಹಣ್ಣು, ಉಪ್ಪು,ಬೆಲ್ಲ ಹಾಕಿ ಕುದಿಸಿ. ತೆಂಗಿನ ತುರಿ, ಕೊತ್ತಂಬರಿ ಮತ್ತು ಮೆಣಸಿನ ಕಾಯಿಯನ್ನು 1ಚಮಚ ಹುರುಳಿಯನ್ನು ಸೇರಿಸಿ ರುಬ್ಬಿಕೊಂಡು ಅದನ್ನು ಕುದಿಸಿದ ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ. ಆ ನಂತರ ಬೆಳ್ಳುಳ್ಳಿ ಮತ್ತು ಕರಿಬೇವು ಒಗ್ಗರಣೆ ಹಾಕಬೇಕು.

Advertisement

 

 

ಹುರುಳಿ ಉಸುಲಿ:

ಬೇಕಾಗುವ ಸಾಮಾನು : ಬೇಯಿಸಿದ ಹುರುಳಿ 1 ಕಪ್, ತೆಂಗಿನ ತುರಿ ಅರ್ಧ ಕಪ್, ಬೆಲ್ಲ ಅಥವಾ ಸಕ್ಕರೆ, ಒಗ್ಗರಣೆಗೆ ಉದ್ದಿನಬೇಳೆ, ಸಾಸಿವೆ ಮೆಣಸು, ಕರಿಬೇವು.
ಮಾಡುವ ವಿಧಾನ: ಬೇಯಿಸಿದ ಹುರುಳಿಯನ್ನು ಮಿಕ್ಸಿಯಲ್ಲಿ ಒಮ್ಮೆ ತಿರುಗಿಸಿ . ಬಾಣಲೆಯಲ್ಲಿ ಎಣ್ಣೆ ಹಾಕಿ ಉದ್ದಿನಬೇಳೆ, ಸಾಸಿವೆ, ಮೆಣಸು, ಕರಿಬೇವು ಹಾಕಿ. ಸಾಸಿವೆ ಸಿಡಿದ ಮೇಲೆ ಹುರುಳಿ, ಸಕ್ಕರೆ, ತೆಂಗಿನತುರಿ ಹಾಕಿ ಮಗುಚಿ. ಬಿಸಿ ಬಿಸಿಯಾಗಿ ತಿನ್ನಲು ರುಚಿಯಾಗಿರುತ್ತದೆ.

Advertisement

 

ಹುರುಳಿ ದೊಡ್ನ

ಬೇಕಾಗುವ ಸಾಮಾನು: 2 ಕಪ್ ಬೆಳ್ತಿಗೆ ಅಕ್ಕಿ, 1 ಕಪ್ ಹುರುಳಿ, 2 ಚಮಚ ಉದ್ದಿನಬೇಳೆ ಉಪ್ಪು, ಕರಿಬೇವು 1 ಕಟ್ಟು, ಸಾಸಿವೆ ಮತ್ತು ಎಣ್ಣೆ.
ಮಾಡುವ ವಿಧಾನ: ಬೆಳ್ತಿಗೆ ಅಕ್ಕಿ ಯನ್ನು, ಹುರುಳಿ, ಉದ್ದಿನಬೇಳೆಯನ್ನು ಬೇರೆ ಬೇರೆಯಾಗಿ 3 ಗಂಟೆ ನೆನೆಸಿಡಿ. ಆನಂತರ ಬೇರೆ ಬೇರೆಯಾಗಿ ರುಬ್ಬಿಕೊಳ್ಳಿ. ಎರಡನ್ನು ಬೆರೆಸಿ 8 ಗಂಟೆ ಹಾಗೆ ಇಡಿ. ಮರುದಿನ ಬಾಣಲೆಗೆ ಎಣ್ಣೆ ಹಾಕಿ ಕಾದಾಗ ಕಾಲು ಚಮಚ ಸಾಸಿವೆ ಮತ್ತು 1 ಎಸಳು ಕರಿಬೇವು ಹಾಕಿ ಸಾಸಿವೆ ಸಿಡಿದ ನಂತರ ಹಿಟ್ಟನ್ನು ಚೆನ್ನಾಗಿ ಕಲಸಿ 1 ಸೌಟು ಹಿಟ್ಟು ಬಾಣಲೆಗೆ ಹಾಕಿ ಮುಚ್ಚಿಡಿ. ಬೆಂದ ನಂತರ ಎಣ್ಣೆ ಹಾಕಿ ಮಗುಚಿ ಹಾಕಿ ಎರಡು ಬದಿ ಬೇಯಿಸಿ. ಪ್ರತಿ ಸಲವು ಮೊದಲು ಒಗ್ಗರಣೆ ಹಾಕಿಕೊಂಡು ಸಾಸಿವೆ ಸಿಡಿದ ನಂತರ ಹಿಟ್ಟು ಹಾಕಿ ದೊಡ್ನ (ಬಾಣಲೆ ದೋಸೆ)ಮಾಡಿ ಚಟ್ನಿಯೊಂದಿಗೆ ಬಿಸಿ ಬಿಸಿಯಾಗಿ ತಿನ್ನಬೇಕು.

 

Advertisement

 

ಬರಹ : ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

4 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

6 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

12 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

12 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

13 hours ago