Advertisement
ಸವಿರುಚಿ

ರುಚಿ ರುಚಿ….. ಹುರುಳಿ ವೈವಿಧ್ಯ

Share

ಹುರುಳಿ ಚಟ್ನಿ:

ಬೇಕಾಗುವ ಸಾಮಾನು: 1/2 ಕಪ್ ಹುರುಳಿ, ಅರ್ಧ ಹೋಳು ತೆಂಗಿನಕಾಯಿ, ಒಣಮೆಣಸು 6, ಹುಣಿಸೆಹಣ್ಣು ಸಣ್ಣ ನೆಲ್ಲಿ ಗಾತ್ರ, ರುಚಿಗೆ ತಕ್ಕಷ್ಟು ಉಪ್ಪು. ಒಗ್ಗರಣೆಗೆ ಸಾಸಿವೆ, ಮೆಣಸಿನಕಾಯಿ, ಕರಿಬೇವು. ಎಣ್ಣೆ.

Advertisement

ಮಾಡುವ ವಿಧಾನ: ಹುರುಳಿಯನ್ನು ಎಣ್ಣೆ ಹಾಕದೆ ಹುರಿಯಿರಿ. ಮೆಣಸಿನಕಾಯಿಯನ್ನು ಎಣ್ಣೆ ಹಾಕಿ ಹುರಿಯಿರಿ. ತೆಂಗಿನತುರಿ, ಹುಣಿಸೆಹಣ್ಣು, ಉಪ್ಪು, ಹುರಿದ ಮೆಣಸಿನಕಾಯಿ ಮತ್ತು ಹುರುಳಿಯನ್ನು ಗಟ್ಟಿಯಾಗಿ ರುಬ್ಬಿಕೊಂಡು ಅದಕ್ಕೆ ಸಾಸಿವೆ ಒಗ್ಗರಣೆ ಹಾಕಿದರೆ ರುಚಿಯಾದ ಹುರುಳಿ ಚಟ್ನಿ ತಯಾರು.

ಹುರುಳಿ ಸಾರು:

Advertisement

ಬೇಕಾಗುವ ಸಾಮಾನು: 1 ಕಪ್ ಹುರುಳಿ , ತೆಂಗಿನ ತುರಿ 1 ಟೇಬಲ್ ಚಮಚ, ಕೊತ್ತಂಬರಿ, 5 ಒಣ ಮೆಣಸಿನಕಾಯಿ, 1ಗೆಡ್ಡೆ ಬೆಳ್ಳುಳ್ಳಿ , ನೆಲ್ಲಿಕಾಯಿ ಗಾತ್ರ ಹುಣಿಸೆಹಣ್ಣು, ಬೆಲ್ಲ , ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ: ಹುರುಳಿಯನ್ನು ಬೇಯಿಸಿ ಬಸಿದ ನೀರಿಗೆ ಹುಣಿಸೆಹಣ್ಣು, ಉಪ್ಪು,ಬೆಲ್ಲ ಹಾಕಿ ಕುದಿಸಿ. ತೆಂಗಿನ ತುರಿ, ಕೊತ್ತಂಬರಿ ಮತ್ತು ಮೆಣಸಿನ ಕಾಯಿಯನ್ನು 1ಚಮಚ ಹುರುಳಿಯನ್ನು ಸೇರಿಸಿ ರುಬ್ಬಿಕೊಂಡು ಅದನ್ನು ಕುದಿಸಿದ ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ. ಆ ನಂತರ ಬೆಳ್ಳುಳ್ಳಿ ಮತ್ತು ಕರಿಬೇವು ಒಗ್ಗರಣೆ ಹಾಕಬೇಕು.

 

Advertisement

 

Advertisement

ಹುರುಳಿ ಉಸುಲಿ:

ಬೇಕಾಗುವ ಸಾಮಾನು : ಬೇಯಿಸಿದ ಹುರುಳಿ 1 ಕಪ್, ತೆಂಗಿನ ತುರಿ ಅರ್ಧ ಕಪ್, ಬೆಲ್ಲ ಅಥವಾ ಸಕ್ಕರೆ, ಒಗ್ಗರಣೆಗೆ ಉದ್ದಿನಬೇಳೆ, ಸಾಸಿವೆ ಮೆಣಸು, ಕರಿಬೇವು.
ಮಾಡುವ ವಿಧಾನ: ಬೇಯಿಸಿದ ಹುರುಳಿಯನ್ನು ಮಿಕ್ಸಿಯಲ್ಲಿ ಒಮ್ಮೆ ತಿರುಗಿಸಿ . ಬಾಣಲೆಯಲ್ಲಿ ಎಣ್ಣೆ ಹಾಕಿ ಉದ್ದಿನಬೇಳೆ, ಸಾಸಿವೆ, ಮೆಣಸು, ಕರಿಬೇವು ಹಾಕಿ. ಸಾಸಿವೆ ಸಿಡಿದ ಮೇಲೆ ಹುರುಳಿ, ಸಕ್ಕರೆ, ತೆಂಗಿನತುರಿ ಹಾಕಿ ಮಗುಚಿ. ಬಿಸಿ ಬಿಸಿಯಾಗಿ ತಿನ್ನಲು ರುಚಿಯಾಗಿರುತ್ತದೆ.

Advertisement

 

Advertisement

ಹುರುಳಿ ದೊಡ್ನ

ಬೇಕಾಗುವ ಸಾಮಾನು: 2 ಕಪ್ ಬೆಳ್ತಿಗೆ ಅಕ್ಕಿ, 1 ಕಪ್ ಹುರುಳಿ, 2 ಚಮಚ ಉದ್ದಿನಬೇಳೆ ಉಪ್ಪು, ಕರಿಬೇವು 1 ಕಟ್ಟು, ಸಾಸಿವೆ ಮತ್ತು ಎಣ್ಣೆ.
ಮಾಡುವ ವಿಧಾನ: ಬೆಳ್ತಿಗೆ ಅಕ್ಕಿ ಯನ್ನು, ಹುರುಳಿ, ಉದ್ದಿನಬೇಳೆಯನ್ನು ಬೇರೆ ಬೇರೆಯಾಗಿ 3 ಗಂಟೆ ನೆನೆಸಿಡಿ. ಆನಂತರ ಬೇರೆ ಬೇರೆಯಾಗಿ ರುಬ್ಬಿಕೊಳ್ಳಿ. ಎರಡನ್ನು ಬೆರೆಸಿ 8 ಗಂಟೆ ಹಾಗೆ ಇಡಿ. ಮರುದಿನ ಬಾಣಲೆಗೆ ಎಣ್ಣೆ ಹಾಕಿ ಕಾದಾಗ ಕಾಲು ಚಮಚ ಸಾಸಿವೆ ಮತ್ತು 1 ಎಸಳು ಕರಿಬೇವು ಹಾಕಿ ಸಾಸಿವೆ ಸಿಡಿದ ನಂತರ ಹಿಟ್ಟನ್ನು ಚೆನ್ನಾಗಿ ಕಲಸಿ 1 ಸೌಟು ಹಿಟ್ಟು ಬಾಣಲೆಗೆ ಹಾಕಿ ಮುಚ್ಚಿಡಿ. ಬೆಂದ ನಂತರ ಎಣ್ಣೆ ಹಾಕಿ ಮಗುಚಿ ಹಾಕಿ ಎರಡು ಬದಿ ಬೇಯಿಸಿ. ಪ್ರತಿ ಸಲವು ಮೊದಲು ಒಗ್ಗರಣೆ ಹಾಕಿಕೊಂಡು ಸಾಸಿವೆ ಸಿಡಿದ ನಂತರ ಹಿಟ್ಟು ಹಾಕಿ ದೊಡ್ನ (ಬಾಣಲೆ ದೋಸೆ)ಮಾಡಿ ಚಟ್ನಿಯೊಂದಿಗೆ ಬಿಸಿ ಬಿಸಿಯಾಗಿ ತಿನ್ನಬೇಕು.

Advertisement

 

Advertisement

 

ಬರಹ : ಚಿತ್ರಾ ಮಟ್ಟಿ

Advertisement
ಚಿತ್ರಾ ಮಟ್ಟಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

18 minutes ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

8 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

9 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

11 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

11 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

17 hours ago