Advertisement
ಸವಿರುಚಿ

ರುಚಿ ರುಚಿ….. ಹುರುಳಿ ವೈವಿಧ್ಯ

Share

ಹುರುಳಿ ಚಟ್ನಿ:

ಬೇಕಾಗುವ ಸಾಮಾನು: 1/2 ಕಪ್ ಹುರುಳಿ, ಅರ್ಧ ಹೋಳು ತೆಂಗಿನಕಾಯಿ, ಒಣಮೆಣಸು 6, ಹುಣಿಸೆಹಣ್ಣು ಸಣ್ಣ ನೆಲ್ಲಿ ಗಾತ್ರ, ರುಚಿಗೆ ತಕ್ಕಷ್ಟು ಉಪ್ಪು. ಒಗ್ಗರಣೆಗೆ ಸಾಸಿವೆ, ಮೆಣಸಿನಕಾಯಿ, ಕರಿಬೇವು. ಎಣ್ಣೆ.

ಮಾಡುವ ವಿಧಾನ: ಹುರುಳಿಯನ್ನು ಎಣ್ಣೆ ಹಾಕದೆ ಹುರಿಯಿರಿ. ಮೆಣಸಿನಕಾಯಿಯನ್ನು ಎಣ್ಣೆ ಹಾಕಿ ಹುರಿಯಿರಿ. ತೆಂಗಿನತುರಿ, ಹುಣಿಸೆಹಣ್ಣು, ಉಪ್ಪು, ಹುರಿದ ಮೆಣಸಿನಕಾಯಿ ಮತ್ತು ಹುರುಳಿಯನ್ನು ಗಟ್ಟಿಯಾಗಿ ರುಬ್ಬಿಕೊಂಡು ಅದಕ್ಕೆ ಸಾಸಿವೆ ಒಗ್ಗರಣೆ ಹಾಕಿದರೆ ರುಚಿಯಾದ ಹುರುಳಿ ಚಟ್ನಿ ತಯಾರು.

ಹುರುಳಿ ಸಾರು:

ಬೇಕಾಗುವ ಸಾಮಾನು: 1 ಕಪ್ ಹುರುಳಿ , ತೆಂಗಿನ ತುರಿ 1 ಟೇಬಲ್ ಚಮಚ, ಕೊತ್ತಂಬರಿ, 5 ಒಣ ಮೆಣಸಿನಕಾಯಿ, 1ಗೆಡ್ಡೆ ಬೆಳ್ಳುಳ್ಳಿ , ನೆಲ್ಲಿಕಾಯಿ ಗಾತ್ರ ಹುಣಿಸೆಹಣ್ಣು, ಬೆಲ್ಲ , ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ: ಹುರುಳಿಯನ್ನು ಬೇಯಿಸಿ ಬಸಿದ ನೀರಿಗೆ ಹುಣಿಸೆಹಣ್ಣು, ಉಪ್ಪು,ಬೆಲ್ಲ ಹಾಕಿ ಕುದಿಸಿ. ತೆಂಗಿನ ತುರಿ, ಕೊತ್ತಂಬರಿ ಮತ್ತು ಮೆಣಸಿನ ಕಾಯಿಯನ್ನು 1ಚಮಚ ಹುರುಳಿಯನ್ನು ಸೇರಿಸಿ ರುಬ್ಬಿಕೊಂಡು ಅದನ್ನು ಕುದಿಸಿದ ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ. ಆ ನಂತರ ಬೆಳ್ಳುಳ್ಳಿ ಮತ್ತು ಕರಿಬೇವು ಒಗ್ಗರಣೆ ಹಾಕಬೇಕು.

 

 

ಹುರುಳಿ ಉಸುಲಿ:

ಬೇಕಾಗುವ ಸಾಮಾನು : ಬೇಯಿಸಿದ ಹುರುಳಿ 1 ಕಪ್, ತೆಂಗಿನ ತುರಿ ಅರ್ಧ ಕಪ್, ಬೆಲ್ಲ ಅಥವಾ ಸಕ್ಕರೆ, ಒಗ್ಗರಣೆಗೆ ಉದ್ದಿನಬೇಳೆ, ಸಾಸಿವೆ ಮೆಣಸು, ಕರಿಬೇವು.
ಮಾಡುವ ವಿಧಾನ: ಬೇಯಿಸಿದ ಹುರುಳಿಯನ್ನು ಮಿಕ್ಸಿಯಲ್ಲಿ ಒಮ್ಮೆ ತಿರುಗಿಸಿ . ಬಾಣಲೆಯಲ್ಲಿ ಎಣ್ಣೆ ಹಾಕಿ ಉದ್ದಿನಬೇಳೆ, ಸಾಸಿವೆ, ಮೆಣಸು, ಕರಿಬೇವು ಹಾಕಿ. ಸಾಸಿವೆ ಸಿಡಿದ ಮೇಲೆ ಹುರುಳಿ, ಸಕ್ಕರೆ, ತೆಂಗಿನತುರಿ ಹಾಕಿ ಮಗುಚಿ. ಬಿಸಿ ಬಿಸಿಯಾಗಿ ತಿನ್ನಲು ರುಚಿಯಾಗಿರುತ್ತದೆ.

 

ಹುರುಳಿ ದೊಡ್ನ

ಬೇಕಾಗುವ ಸಾಮಾನು: 2 ಕಪ್ ಬೆಳ್ತಿಗೆ ಅಕ್ಕಿ, 1 ಕಪ್ ಹುರುಳಿ, 2 ಚಮಚ ಉದ್ದಿನಬೇಳೆ ಉಪ್ಪು, ಕರಿಬೇವು 1 ಕಟ್ಟು, ಸಾಸಿವೆ ಮತ್ತು ಎಣ್ಣೆ.
ಮಾಡುವ ವಿಧಾನ: ಬೆಳ್ತಿಗೆ ಅಕ್ಕಿ ಯನ್ನು, ಹುರುಳಿ, ಉದ್ದಿನಬೇಳೆಯನ್ನು ಬೇರೆ ಬೇರೆಯಾಗಿ 3 ಗಂಟೆ ನೆನೆಸಿಡಿ. ಆನಂತರ ಬೇರೆ ಬೇರೆಯಾಗಿ ರುಬ್ಬಿಕೊಳ್ಳಿ. ಎರಡನ್ನು ಬೆರೆಸಿ 8 ಗಂಟೆ ಹಾಗೆ ಇಡಿ. ಮರುದಿನ ಬಾಣಲೆಗೆ ಎಣ್ಣೆ ಹಾಕಿ ಕಾದಾಗ ಕಾಲು ಚಮಚ ಸಾಸಿವೆ ಮತ್ತು 1 ಎಸಳು ಕರಿಬೇವು ಹಾಕಿ ಸಾಸಿವೆ ಸಿಡಿದ ನಂತರ ಹಿಟ್ಟನ್ನು ಚೆನ್ನಾಗಿ ಕಲಸಿ 1 ಸೌಟು ಹಿಟ್ಟು ಬಾಣಲೆಗೆ ಹಾಕಿ ಮುಚ್ಚಿಡಿ. ಬೆಂದ ನಂತರ ಎಣ್ಣೆ ಹಾಕಿ ಮಗುಚಿ ಹಾಕಿ ಎರಡು ಬದಿ ಬೇಯಿಸಿ. ಪ್ರತಿ ಸಲವು ಮೊದಲು ಒಗ್ಗರಣೆ ಹಾಕಿಕೊಂಡು ಸಾಸಿವೆ ಸಿಡಿದ ನಂತರ ಹಿಟ್ಟು ಹಾಕಿ ದೊಡ್ನ (ಬಾಣಲೆ ದೋಸೆ)ಮಾಡಿ ಚಟ್ನಿಯೊಂದಿಗೆ ಬಿಸಿ ಬಿಸಿಯಾಗಿ ತಿನ್ನಬೇಕು.

 

 

ಬರಹ : ಚಿತ್ರಾ ಮಟ್ಟಿ

ಚಿತ್ರಾ ಮಟ್ಟಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago