ರೇಡಿಯೋ ಪಾಂಚಜನ್ಯಕ್ಕೆ ಕೇಂದ್ರ ಪ್ರಸಾರ ಮಂತ್ರಾಲಯದ ವರಿಷ್ಠರ ಭೇಟಿ

November 24, 2019
9:45 AM

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ಸಮುದಾಯ ಬಾನುಲಿ ‘ರೇಡಿಯೋ ಪಾಂಚಜನ್ಯ’ಕ್ಕೆ 90.8 ಎಫ್.ಎಂ. ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ಮಂತ್ರಾಲಯದ ಡೆಪ್ಯೂಟಿ ಕಾರ್ಯದರ್ಶಿ ಸಂಜೀವ ಕುಮಾರ್ ಭೇಟಿ ನೀಡಿದರು.

Advertisement
Advertisement

ರೇಡಿಯೋದ ಸಮುದಾಯ ಕಾಳಜಿಯ ಕಾರ್ಯಕ್ರಮಗಳು ಹಾಗೂ ಸಮಾಜಮುಖಿ ಚಿಂತನೆಯ ಕಾರ್ಯಕ್ರಮಗಳ ಪ್ರಸಾರಕ್ಕೆ ಸಂಜೀವ ಕುಮಾರ್ ತೃಪ್ತಿ ವ್ಯಕ್ತಪಡಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಮಸಾಮಯಿಕ ವಿಚಾರಗಳು ತಲುಪಲು ಸಮುದಾಯ ರೇಡಿಯೋ ಉತ್ತಮ ಉಪಾಧಿ ಎನ್ನುತ್ತಾ, “ವಿದ್ಯಾರ್ಥಿಗಳ ಜ್ಞಾನದಾಹಕ್ಕೆ ರೇಡಿಯೋ ಒಂದು ಪರಿಣಾಮಕಾರಿ ಮಾಧ್ಯಮ. ಹಾಗಾಗಿ ಶೈಕ್ಷಣಿಕ ವಿಚಾರಗಳಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಬೇಕಾದ ಕಾಲಘಟ್ಟದಲ್ಲಿದ್ದೇವೆ ಎಂದರು.

ಮಂಗಳೂರು ಆಕಾಶವಾಣಿಯ ಇಂಜಿನಿಯರ್ ಅಶೋಕ್ ಕುಮಾರ್ ಪಾಂಚಜನ್ಯ ಬಾನುಲಿಯ ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಕೃಷ್ಣ ಭಟ್, ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್, ವಿಶೇಷಾಧಿಕಾರಿ ವೆಂಕಟೇಶ್, ರೇಡಿಯೋ ಪಾಂಚಜನ್ಯ ಸಮಿತಿಯ ಅಧ್ಯಕ್ಷ ಪ್ರೇಮಾನಂದ ಡಿ., ಕಾರ್ಯದರ್ಶಿ ಡಿ. ವಿಜಯಕೃಷ್ಣ ಭಟ್, ನಾರಾಯಣ ಕಾರಂತ ಪೆರಾಜೆ, ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಪಾಂಚಜನ್ಯದ ಪ್ರಸಾರ ಸಂಯೋಜಕಿ ತೇಜಸ್ವಿ, ತಾಂತ್ರಿಕ ಪ್ರಮುಖ್ ಪ್ರಶಾಂತ್, ಯಶಸ್ ಸಂಯೋಜಕ ಗೋವಿಂದರಾಜ್ ಶರ್ಮ, ಲಕ್ಷ್ಮೀಪ್ರಸಾದ್, ಪುನೀತ್, ಸಂತೋಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ
May 24, 2025
9:23 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |
May 24, 2025
4:43 PM
by: ಮಹೇಶ್ ಪುಚ್ಚಪ್ಪಾಡಿ
ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ
May 24, 2025
11:10 AM
by: ದ ರೂರಲ್ ಮಿರರ್.ಕಾಂ
50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18
May 24, 2025
10:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group