ರೇಡಿಯೋ ಪಾಂಚಜನ್ಯಕ್ಕೆ ಕೇಂದ್ರ ಪ್ರಸಾರ ಮಂತ್ರಾಲಯದ ವರಿಷ್ಠರ ಭೇಟಿ

November 24, 2019
9:45 AM

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ಸಮುದಾಯ ಬಾನುಲಿ ‘ರೇಡಿಯೋ ಪಾಂಚಜನ್ಯ’ಕ್ಕೆ 90.8 ಎಫ್.ಎಂ. ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ಮಂತ್ರಾಲಯದ ಡೆಪ್ಯೂಟಿ ಕಾರ್ಯದರ್ಶಿ ಸಂಜೀವ ಕುಮಾರ್ ಭೇಟಿ ನೀಡಿದರು.

ರೇಡಿಯೋದ ಸಮುದಾಯ ಕಾಳಜಿಯ ಕಾರ್ಯಕ್ರಮಗಳು ಹಾಗೂ ಸಮಾಜಮುಖಿ ಚಿಂತನೆಯ ಕಾರ್ಯಕ್ರಮಗಳ ಪ್ರಸಾರಕ್ಕೆ ಸಂಜೀವ ಕುಮಾರ್ ತೃಪ್ತಿ ವ್ಯಕ್ತಪಡಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಮಸಾಮಯಿಕ ವಿಚಾರಗಳು ತಲುಪಲು ಸಮುದಾಯ ರೇಡಿಯೋ ಉತ್ತಮ ಉಪಾಧಿ ಎನ್ನುತ್ತಾ, “ವಿದ್ಯಾರ್ಥಿಗಳ ಜ್ಞಾನದಾಹಕ್ಕೆ ರೇಡಿಯೋ ಒಂದು ಪರಿಣಾಮಕಾರಿ ಮಾಧ್ಯಮ. ಹಾಗಾಗಿ ಶೈಕ್ಷಣಿಕ ವಿಚಾರಗಳಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಬೇಕಾದ ಕಾಲಘಟ್ಟದಲ್ಲಿದ್ದೇವೆ ಎಂದರು.

ಮಂಗಳೂರು ಆಕಾಶವಾಣಿಯ ಇಂಜಿನಿಯರ್ ಅಶೋಕ್ ಕುಮಾರ್ ಪಾಂಚಜನ್ಯ ಬಾನುಲಿಯ ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಕೃಷ್ಣ ಭಟ್, ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್, ವಿಶೇಷಾಧಿಕಾರಿ ವೆಂಕಟೇಶ್, ರೇಡಿಯೋ ಪಾಂಚಜನ್ಯ ಸಮಿತಿಯ ಅಧ್ಯಕ್ಷ ಪ್ರೇಮಾನಂದ ಡಿ., ಕಾರ್ಯದರ್ಶಿ ಡಿ. ವಿಜಯಕೃಷ್ಣ ಭಟ್, ನಾರಾಯಣ ಕಾರಂತ ಪೆರಾಜೆ, ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಪಾಂಚಜನ್ಯದ ಪ್ರಸಾರ ಸಂಯೋಜಕಿ ತೇಜಸ್ವಿ, ತಾಂತ್ರಿಕ ಪ್ರಮುಖ್ ಪ್ರಶಾಂತ್, ಯಶಸ್ ಸಂಯೋಜಕ ಗೋವಿಂದರಾಜ್ ಶರ್ಮ, ಲಕ್ಷ್ಮೀಪ್ರಸಾದ್, ಪುನೀತ್, ಸಂತೋಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror