ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ಸಮುದಾಯ ಬಾನುಲಿ ‘ರೇಡಿಯೋ ಪಾಂಚಜನ್ಯ’ಕ್ಕೆ 90.8 ಎಫ್.ಎಂ. ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ಮಂತ್ರಾಲಯದ ಡೆಪ್ಯೂಟಿ ಕಾರ್ಯದರ್ಶಿ ಸಂಜೀವ ಕುಮಾರ್ ಭೇಟಿ ನೀಡಿದರು.
ರೇಡಿಯೋದ ಸಮುದಾಯ ಕಾಳಜಿಯ ಕಾರ್ಯಕ್ರಮಗಳು ಹಾಗೂ ಸಮಾಜಮುಖಿ ಚಿಂತನೆಯ ಕಾರ್ಯಕ್ರಮಗಳ ಪ್ರಸಾರಕ್ಕೆ ಸಂಜೀವ ಕುಮಾರ್ ತೃಪ್ತಿ ವ್ಯಕ್ತಪಡಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಮಸಾಮಯಿಕ ವಿಚಾರಗಳು ತಲುಪಲು ಸಮುದಾಯ ರೇಡಿಯೋ ಉತ್ತಮ ಉಪಾಧಿ ಎನ್ನುತ್ತಾ, “ವಿದ್ಯಾರ್ಥಿಗಳ ಜ್ಞಾನದಾಹಕ್ಕೆ ರೇಡಿಯೋ ಒಂದು ಪರಿಣಾಮಕಾರಿ ಮಾಧ್ಯಮ. ಹಾಗಾಗಿ ಶೈಕ್ಷಣಿಕ ವಿಚಾರಗಳಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಬೇಕಾದ ಕಾಲಘಟ್ಟದಲ್ಲಿದ್ದೇವೆ ಎಂದರು.
ಮಂಗಳೂರು ಆಕಾಶವಾಣಿಯ ಇಂಜಿನಿಯರ್ ಅಶೋಕ್ ಕುಮಾರ್ ಪಾಂಚಜನ್ಯ ಬಾನುಲಿಯ ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಕೃಷ್ಣ ಭಟ್, ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್, ವಿಶೇಷಾಧಿಕಾರಿ ವೆಂಕಟೇಶ್, ರೇಡಿಯೋ ಪಾಂಚಜನ್ಯ ಸಮಿತಿಯ ಅಧ್ಯಕ್ಷ ಪ್ರೇಮಾನಂದ ಡಿ., ಕಾರ್ಯದರ್ಶಿ ಡಿ. ವಿಜಯಕೃಷ್ಣ ಭಟ್, ನಾರಾಯಣ ಕಾರಂತ ಪೆರಾಜೆ, ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಪಾಂಚಜನ್ಯದ ಪ್ರಸಾರ ಸಂಯೋಜಕಿ ತೇಜಸ್ವಿ, ತಾಂತ್ರಿಕ ಪ್ರಮುಖ್ ಪ್ರಶಾಂತ್, ಯಶಸ್ ಸಂಯೋಜಕ ಗೋವಿಂದರಾಜ್ ಶರ್ಮ, ಲಕ್ಷ್ಮೀಪ್ರಸಾದ್, ಪುನೀತ್, ಸಂತೋಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…