Advertisement
ಸುದ್ದಿಗಳು

ರೇಡಿಯೋ ಪಾಂಚಜನ್ಯಕ್ಕೆ ಕೇಂದ್ರ ಪ್ರಸಾರ ಮಂತ್ರಾಲಯದ ವರಿಷ್ಠರ ಭೇಟಿ

Share

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ಸಮುದಾಯ ಬಾನುಲಿ ‘ರೇಡಿಯೋ ಪಾಂಚಜನ್ಯ’ಕ್ಕೆ 90.8 ಎಫ್.ಎಂ. ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ಮಂತ್ರಾಲಯದ ಡೆಪ್ಯೂಟಿ ಕಾರ್ಯದರ್ಶಿ ಸಂಜೀವ ಕುಮಾರ್ ಭೇಟಿ ನೀಡಿದರು.

ರೇಡಿಯೋದ ಸಮುದಾಯ ಕಾಳಜಿಯ ಕಾರ್ಯಕ್ರಮಗಳು ಹಾಗೂ ಸಮಾಜಮುಖಿ ಚಿಂತನೆಯ ಕಾರ್ಯಕ್ರಮಗಳ ಪ್ರಸಾರಕ್ಕೆ ಸಂಜೀವ ಕುಮಾರ್ ತೃಪ್ತಿ ವ್ಯಕ್ತಪಡಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸಮಸಾಮಯಿಕ ವಿಚಾರಗಳು ತಲುಪಲು ಸಮುದಾಯ ರೇಡಿಯೋ ಉತ್ತಮ ಉಪಾಧಿ ಎನ್ನುತ್ತಾ, “ವಿದ್ಯಾರ್ಥಿಗಳ ಜ್ಞಾನದಾಹಕ್ಕೆ ರೇಡಿಯೋ ಒಂದು ಪರಿಣಾಮಕಾರಿ ಮಾಧ್ಯಮ. ಹಾಗಾಗಿ ಶೈಕ್ಷಣಿಕ ವಿಚಾರಗಳಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಬೇಕಾದ ಕಾಲಘಟ್ಟದಲ್ಲಿದ್ದೇವೆ ಎಂದರು.

ಮಂಗಳೂರು ಆಕಾಶವಾಣಿಯ ಇಂಜಿನಿಯರ್ ಅಶೋಕ್ ಕುಮಾರ್ ಪಾಂಚಜನ್ಯ ಬಾನುಲಿಯ ತಾಂತ್ರಿಕ ಮಾಹಿತಿಗಳನ್ನು ಪರಿಶೀಲಿಸಿ ಗುಣಮಟ್ಟದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಕೃಷ್ಣ ಭಟ್, ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್, ವಿಶೇಷಾಧಿಕಾರಿ ವೆಂಕಟೇಶ್, ರೇಡಿಯೋ ಪಾಂಚಜನ್ಯ ಸಮಿತಿಯ ಅಧ್ಯಕ್ಷ ಪ್ರೇಮಾನಂದ ಡಿ., ಕಾರ್ಯದರ್ಶಿ ಡಿ. ವಿಜಯಕೃಷ್ಣ ಭಟ್, ನಾರಾಯಣ ಕಾರಂತ ಪೆರಾಜೆ, ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಪಾಂಚಜನ್ಯದ ಪ್ರಸಾರ ಸಂಯೋಜಕಿ ತೇಜಸ್ವಿ, ತಾಂತ್ರಿಕ ಪ್ರಮುಖ್ ಪ್ರಶಾಂತ್, ಯಶಸ್ ಸಂಯೋಜಕ ಗೋವಿಂದರಾಜ್ ಶರ್ಮ, ಲಕ್ಷ್ಮೀಪ್ರಸಾದ್, ಪುನೀತ್, ಸಂತೋಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

13 minutes ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

2 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

3 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

10 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

11 hours ago