Advertisement
ಸುದ್ದಿಗಳು

ರೇಡಿಯೋ ಪಾಂಚಜನ್ಯದಿಂದ ‘ಬಾನುಲಿ ಕಾರ್ಯಕ್ರಮಗಳು’ ಮಾಹಿತಿ ಕಾರ್ಯಾಗಾರ

Share

ಪುತ್ತೂರು: ಇನ್ನೊಬ್ಬರ ಚಿಂತನೆಯನ್ನು ಒಟ್ಟುಗೂಡಿಸಿಕೊಂಡು ಮಾಡುವಂತಹ ಕಾರ್ಯಕ್ರಮವೇ ಬಾನುಲಿ ಕಾರ್ಯಕ್ರಮ. ಸಮುದಾಯ ಬಾನುಲಿ ಕೇಂದ್ರಕ್ಕೆ ಜನರ ಸಹಕಾರ, ಮಾರ್ಗದರ್ಶನ ಅವಶ್ಯಕವಾಗಿದೆ. ಕೇಳುಗರ ಅಭಿಪ್ರಾಯ, ಅಭಿರುಚಿಗೆ ತಕ್ಕಂತೆ ಇದು ಕಾರ್ಯಕ್ರಮ ನೀಡುತ್ತಾ ಬರುತ್ತಿದೆ. ಆ ನಿಟ್ಟಿನಲ್ಲಿ ದೇಶದ ಪ್ರಗತಿಗೆ ಇದು ಕೈ ಜೋಡಿಸುತ್ತಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣಭಟ್ ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಸಮುದಾಯ ಬಾನುಲಿ ಕೇಂದ್ರ ಹಾಗೂ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ “ಬಾನುಲಿ ಕಾರ್ಯಕ್ರಮಗಳು” ಎಂಬ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು. ಸಮುದಾಯ ಬಾನುಲಿ ಕೇಂದ್ರವು ಆ ವ್ಯಾಪ್ತಿಯ ಜನರ ಸಮುದಾಯಕ್ಕೆ ಪ್ರೇರಣೆಯಾಗುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಾ ಬರುತ್ತಿದೆ. ಆದರೆ ಶ್ರೋತೃಗಳ ಸಂಖ್ಯೆ ಕ್ಷೀಣಿಸುತ್ತಿರುವ ಈ ಕಾಲಘಟ್ಟದಲ್ಲಿ ಇನ್ನೂ ಅಗಾಧವಾದ ರೀತಿಯಲ್ಲಿ ಇದು ಪರಿಣಾಮ ಬೀರಬೇಕಾಗಿದೆ. ಜನರು ಇಂತಹ ಕಾರ್ಯಕ್ರಮಕ್ಕೆ ಪ್ರತಿಕ್ರಿಯಿಸಿದಾಗಲೇ ಅದು ಸಾಧ್ಯವಾಗುತ್ತದೆ ಎಂದು ಹೇಳಿದರು.

Advertisement

ಅಧ್ಯಕ್ಷತೆ ವಹಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಮಾನವ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಆರ್ಥಿಕ, ಸಾಮಾಜಿಕ, ವೈಜ್ಞಾನಿಕ ವಿಚಾರಗಳನ್ನೊಳಗೊಂಡಂತೆ ಬಾನುಲಿಕೇಂದ್ರಗಳು ಕಾರ್ಯಕ್ರಮ ನೀಡುತ್ತಿದೆ. ಅವಕಾಶಗಳು ಕದ ತಟ್ಟಿದಾಗ ಅದನ್ನು ಉಪಯೋಗಿಸಿಕೊಂಡರೆ ಅದು ಸಾಧನೆಯಾಗಿ ಪರಿವರ್ತನೆಯಾಗುತ್ತದೆ. ಬಾನುಲಿ ಕೇಂದ್ರವು ಜನರ ಪ್ರತಿಭೆಗಳನ್ನು ಬಾಹ್ಯಲೋಕಕ್ಕೆ ತೆರೆದಿಟ್ಟು ಪ್ರಗತಿಗಣುಗುಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ “ರೇಡಿಯೋದ ವಿವಿಧ ಸಾಧ್ಯತೆಗಳು” ಎಂಬ ವಿಷಯದ ಕುರಿತು ಮಣಿಪಾಲ ಸಮುದಾಯ ಬಾನುಲಿ ಕೇಂದ್ರದ ಸಂಯೋಜಕ ಶ್ಯಾಮ್ ಭಟ್, ಮತ್ತು “ಬಾನುಲಿ ಕೇಂದ್ರದಲ್ಲಿ ಕಾರ್ಯಕ್ರಮ ವೈವಿಧ್ಯ” ಎಂಬ ವಿಷಯದ ಕುರಿತು ರೇಡಿಯೋ ಪಾಂಚಜನ್ಯದ ಕಾರ್ಯಕ್ರಮ ಸಂಯೋಜಕ ಡಾ.ಎಚ್.ಜಿ. ಶ್ರೀಧರ್ ಮಾಹಿತಿ ನೀಡಿದರು.
ವೇದಿಕೆಯಲ್ಲಿ ರೇಡಿಯೋ ಪಾಂಚಜನ್ಯದ ಅಧ್ಯಕ್ಷ ಪ್ರೇಮಾನಂದ, ಕಾರ್ಯದರ್ಶಿ ವಿಜಯಕೃಷ್ಣ ದರ್ಬೆ  ಉಪಸ್ಥಿತರಿದ್ದರು.

Advertisement

ವಿದ್ಯಾರ್ಥಿನಿ ಪವಿತ್ರಾ ಪ್ರಾರ್ಥಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಅಧಿಕಾರಿ ವೆಂಕಟೇಶ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಪತ್ರಿಕೋದ್ಯಮ ವಿಭಾಗದ ಸಂಯೋಜಕ ರಾಕೇಶ್ ಕುಮಾರ್ ಕಮ್ಮಜೆ ವಂದಿಸಿದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಪ್ರಜ್ಞಾ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

15 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

17 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

24 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago