ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರಾಯೋಜಿತ ರೇಡಿಯೋ ಪಾಂಚಜನ್ಯ 90.8 ಸಮುದಾಯ ಬಾನುಲಿ ಕೇಂದ್ರದ ವತಿಯಿಂದ ಹೆಚ್.ಡಿ. ಕೋಟೆಯ ಸರಗೂರಿನ ಜನಧ್ವನಿ ಸಮುದಾಯ ಬಾನುಲಿ ಕೇಂದ್ರಕ್ಕೆ ಅಕ್ಟೋಬರ್ 19ರಂದು ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.
ಅಧ್ಯಯನ ಸಂದರ್ಭದಲ್ಲಿ ಜನಧ್ವನಿ ಬಾನುಲಿ ಕೇಂದ್ರದಲ್ಲಿನ ಕಾರ್ಯಕ್ರಮ ರೂಪುರೇಷೆಗಳ ಬಗೆಗೆ ಚರ್ಚೆ ನಡೆಸಲಾಯಿತು. ಸಮುದಾಯದ ಮಂದಿಯನ್ನು ರೇಡಿಯೋದೆಡೆಗೆ ಕರೆತರುವಲ್ಲಿನ ಆರಂಭಿಕ ದಿನಗಳ ಸವಾಲುಗಳು, ಮಾಧ್ಯಮ ಲೋಕಕ್ಕೆ ತೆರೆದುಕೊಳ್ಳದಿರುವವರನ್ನು ಬಾನುಲಿಯಲ್ಲಿ ತೊಡಗಿಸಿಕೊಳ್ಳುವ ಸಂದರ್ಭದಲ್ಲಿನ ಪ್ರಾಯೋಗಿಕ ಸಮಸ್ಯೆಗಳ ಬಗೆಗೆ ವಿಶ್ಲೇಷಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಹಸಂಯೋಜಕ ಶಿವಕುಮಾರ್ ಸಮುದಾಯ ಬಾನುಲಿ ಎನ್ನುವುದು ಸಮಾಜದ ಅಭಿವೃದ್ಧಿಗೆ ಪೂರಕವಾದದ್ದು. ಜನರ ಒಳಗೊಳ್ಳುವಿಕೆ ಇಲ್ಲಿ ಬಹಳ ಮುಖ್ಯ. ಬಾನುಲಿ ಕೇಂದ್ರದ ಆರಂಭಿಕ ದಿನಗಳಲ್ಲಿ ಕಾರ್ಯಕ್ರಮ ರೂಪಿಸುವಿಕೆ ಬಹುದೊಡ್ಡ ಸವಾಲಾಗಿ ಭಾಸವಾಗುತ್ತದೆ. ಆದರೆ ಕ್ರಮೇಣ ಎಲ್ಲವೂ ಸುಲಭಸಾಧ್ಯವಾಗುತ್ತದೆ ಎಂದು ನುಡಿದರು.
ಅಧ್ಯಯನ ಪ್ರವಾಸದಲ್ಲಿ ರೇಡಿಯೋ ಪಾಂಚಜನ್ಯದ ಆಡಳಿತ ಮಂಡಳಿ ಕಾರ್ಯದರ್ಶಿ ವಿಜಯ ಕೃಷ್ಣ, ಕೋಶಾಧಿಕಾರಿ ಪ್ರಕಾಶ್ ಶೆಣೈ, ಸದಸ್ಯ ನಾ.ಕಾರಂತ ಪೆರಾಜೆ, ಕಾರ್ಯಕ್ರಮ ಸಂಯೋಜಕ ಡಾ.ಶ್ರೀಧರ ಎಚ್.ಜಿ, ನಿಲಯ ಸಂಯೋಜಕಿ ಶಿಲ್ಪ, ನಿಯೋಜಿತ ಸಂಯೋಜಕಿ ತೇಜಸ್ವಿ, ತಾಂತ್ರಿಕ ಸಹಾಯಕ ಪ್ರಶಾಂತ್, ಕಲ್ಲಡ್ಕ ಶ್ರೀರಾಮ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ್ ಕಲ್ಲಡ್ಕ, ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಯೋಜಕಿ ಡಾ.ವಿಜಯ ಸರಸ್ವತಿ, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಉಪನ್ಯಾಸಕ ಭರತ್ರಾಜ್ ಕರ್ತಡ್ಕ, ಇಂಗ್ಲಿಷ್ ಉಪನ್ಯಾಸಕ ಗಣೇಶ್ ಪ್ರಸಾದ್, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ, ವಿವೇಕಾನಂದ ಕಾನೂನು ಕಾಲೇಜಿನ ಉಪನ್ಯಾಸಕಿ ಸಂಗೀತಾ, ವಿವೇಕಾನಂದ ಬಿ.ಎಡ್ ಕಾಲೇಜಿನ ಉಪನ್ಯಾಸಕಿ ಡಾ.ಶೋಭಿತಾ ಸತೀಶ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸುಭಾಷ್ ಪಟ್ಟಾಜೆ, ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷಾಧಿಕಾರಿ ವೆಂಕಟೇಶ್, ವಿವೇಕಾನಂದ ಕಾಲೇಜಿನ ಎಂ.ಸಿ.ಜೆ ವಿಭಾಗದ ಪ್ರಾಯೋಗಿಕ ಯೂಟ್ಯೂಬ್ ವಾಹಿನಿ ವಿಕಸನ ಟಿವಿ ಹಾಗೂ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ತಾಂತ್ರಿಕ ಸಹಾಯಕ ಸಂತೋಷ್ಕುಮಾರ್ ಉಪಸ್ಥಿತರಿದ್ದರು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…