Advertisement
ಸುದ್ದಿಗಳು

ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ ವತಿಯಿಂದ ಅಧ್ಯಯನ ಪ್ರವಾಸ

Share

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರಾಯೋಜಿತ ರೇಡಿಯೋ ಪಾಂಚಜನ್ಯ 90.8 ಸಮುದಾಯ ಬಾನುಲಿ ಕೇಂದ್ರದ ವತಿಯಿಂದ ಹೆಚ್.ಡಿ. ಕೋಟೆಯ ಸರಗೂರಿನ ಜನಧ್ವನಿ ಸಮುದಾಯ ಬಾನುಲಿ ಕೇಂದ್ರಕ್ಕೆ ಅಕ್ಟೋಬರ್ 19ರಂದು ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.

Advertisement
Advertisement

ಅಧ್ಯಯನ ಸಂದರ್ಭದಲ್ಲಿ ಜನಧ್ವನಿ ಬಾನುಲಿ ಕೇಂದ್ರದಲ್ಲಿನ ಕಾರ್ಯಕ್ರಮ ರೂಪುರೇಷೆಗಳ ಬಗೆಗೆ ಚರ್ಚೆ ನಡೆಸಲಾಯಿತು. ಸಮುದಾಯದ ಮಂದಿಯನ್ನು ರೇಡಿಯೋದೆಡೆಗೆ ಕರೆತರುವಲ್ಲಿನ ಆರಂಭಿಕ ದಿನಗಳ ಸವಾಲುಗಳು, ಮಾಧ್ಯಮ ಲೋಕಕ್ಕೆ ತೆರೆದುಕೊಳ್ಳದಿರುವವರನ್ನು ಬಾನುಲಿಯಲ್ಲಿ ತೊಡಗಿಸಿಕೊಳ್ಳುವ ಸಂದರ್ಭದಲ್ಲಿನ ಪ್ರಾಯೋಗಿಕ ಸಮಸ್ಯೆಗಳ ಬಗೆಗೆ ವಿಶ್ಲೇಷಣೆ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಹಸಂಯೋಜಕ ಶಿವಕುಮಾರ್ ಸಮುದಾಯ ಬಾನುಲಿ ಎನ್ನುವುದು ಸಮಾಜದ ಅಭಿವೃದ್ಧಿಗೆ ಪೂರಕವಾದದ್ದು. ಜನರ ಒಳಗೊಳ್ಳುವಿಕೆ ಇಲ್ಲಿ ಬಹಳ ಮುಖ್ಯ. ಬಾನುಲಿ ಕೇಂದ್ರದ ಆರಂಭಿಕ ದಿನಗಳಲ್ಲಿ ಕಾರ್ಯಕ್ರಮ ರೂಪಿಸುವಿಕೆ ಬಹುದೊಡ್ಡ ಸವಾಲಾಗಿ ಭಾಸವಾಗುತ್ತದೆ. ಆದರೆ ಕ್ರಮೇಣ ಎಲ್ಲವೂ ಸುಲಭಸಾಧ್ಯವಾಗುತ್ತದೆ ಎಂದು ನುಡಿದರು.

ಅಧ್ಯಯನ ಪ್ರವಾಸದಲ್ಲಿ ರೇಡಿಯೋ ಪಾಂಚಜನ್ಯದ ಆಡಳಿತ ಮಂಡಳಿ ಕಾರ್ಯದರ್ಶಿ ವಿಜಯ ಕೃಷ್ಣ, ಕೋಶಾಧಿಕಾರಿ ಪ್ರಕಾಶ್ ಶೆಣೈ, ಸದಸ್ಯ ನಾ.ಕಾರಂತ ಪೆರಾಜೆ, ಕಾರ್ಯಕ್ರಮ ಸಂಯೋಜಕ ಡಾ.ಶ್ರೀಧರ ಎಚ್.ಜಿ, ನಿಲಯ ಸಂಯೋಜಕಿ ಶಿಲ್ಪ, ನಿಯೋಜಿತ ಸಂಯೋಜಕಿ ತೇಜಸ್ವಿ, ತಾಂತ್ರಿಕ ಸಹಾಯಕ ಪ್ರಶಾಂತ್, ಕಲ್ಲಡ್ಕ ಶ್ರೀರಾಮ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ್ ಕಲ್ಲಡ್ಕ, ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಯೋಜಕಿ ಡಾ.ವಿಜಯ ಸರಸ್ವತಿ, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಉಪನ್ಯಾಸಕ ಭರತ್‍ರಾಜ್ ಕರ್ತಡ್ಕ, ಇಂಗ್ಲಿಷ್ ಉಪನ್ಯಾಸಕ ಗಣೇಶ್ ಪ್ರಸಾದ್, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ, ವಿವೇಕಾನಂದ ಕಾನೂನು ಕಾಲೇಜಿನ ಉಪನ್ಯಾಸಕಿ ಸಂಗೀತಾ, ವಿವೇಕಾನಂದ ಬಿ.ಎಡ್ ಕಾಲೇಜಿನ ಉಪನ್ಯಾಸಕಿ ಡಾ.ಶೋಭಿತಾ ಸತೀಶ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸುಭಾಷ್ ಪಟ್ಟಾಜೆ, ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷಾಧಿಕಾರಿ ವೆಂಕಟೇಶ್, ವಿವೇಕಾನಂದ ಕಾಲೇಜಿನ ಎಂ.ಸಿ.ಜೆ ವಿಭಾಗದ ಪ್ರಾಯೋಗಿಕ ಯೂಟ್ಯೂಬ್ ವಾಹಿನಿ ವಿಕಸನ ಟಿವಿ ಹಾಗೂ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ತಾಂತ್ರಿಕ ಸಹಾಯಕ ಸಂತೋಷ್‍ಕುಮಾರ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

18 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

19 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

20 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

20 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

22 hours ago