ಬೆಂಗಳೂರು: ನರೇಂದ್ರ ಮೋದಿ ಸರಕಾರದ 2 ನೇ ಅವಧಿಯ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಕೊಡುಗೆ ನೀಡಿದೆ. ಇದು 2 ನೇ ಅವಧಿಯ 1 ನೇ ಹೆಜ್ಜೆ.
ಎಲ್ಲಾ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಲು ಹಾಗೂ 1 ಲಕ್ಷ ರೂ.ವರೆಗೆ ಬಡ್ಡಿರಹಿತ ಅಲ್ಪಾವಧಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲಗಳನ್ನು ನೀಡಲು ಉದ್ದೇಶಿಸಲಾಗಿದೆ. ಇನ್ನು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂ. ನೀಡುವುದನ್ನು ಎಲ್ಲ ರೈತರಿಗೂ ವಿಸ್ತರಿಸಲಾಗಿದೆ. ಈ ಮೊದಲು ಕಿಸಾನ್ ಯೋಜನೆಯು 2 ಹೆಕ್ಟೇರ್ವರೆಗೆ ಭೂಮಿಯುಳ್ಳ ರೈತರಿಗೆ ಮಾತ್ರ ಅನ್ವಯವಾಗುತ್ತಿತ್ತು.ಇದರಿಂದ ದೇಶದ ಸುಮಾರು 15 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಒಟ್ಟು ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಪೆನ್ಷನ್ ಯೋಜನಾ ಅಡಿ 18ರಿಂದ 40 ವರ್ಷದವರೆಗಿನ ನೋಂದಾಯಿತ ಸಣ್ಣ ಹಾಗೂ ಅತಿ ಸಣ್ಣ ರೈತರು 60 ವರ್ಷ ಕ್ರಮಿಸಿದ ಬಳಿಕ ಕನಿಷ್ಠ 3 ಸಾವಿರ ರೂ. ನಿಗದಿತ ಪಿಂಚಣಿ ಪಡೆದುಕೊಳ್ಳುವ ಯೋಜನೆ ಇದಾಗಿದೆ.
ಈ ಎರಡು ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಹಾಗೂ 2 ಕೋಟಿ ಅಧಿಕ ರೈತರನ್ನು ಸೇರಿಸಿಕೊಂಡು ಒಟ್ಟು 14.5 ಕೋಟಿ ಫಲಾನುಭವಿಗಳಾಗುತ್ತಾರೆ ಎಂದು ಅಂದಾಜಿಸಲಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…