Advertisement
ಕೃಷಿ

ರೈತರಿಗೂ ಇನ್ನು ಸಿಗಲಿದೆ ಪೆನ್ಷನ್ : ನಮೋ 2.0 ಸರಕಾರದಿಂದ ಕೃಷಿಗೆ ಕೊಡುಗೆ

Share

ಬೆಂಗಳೂರು:  ನರೇಂದ್ರ ಮೋದಿ ಸರಕಾರದ 2 ನೇ ಅವಧಿಯ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಕೊಡುಗೆ ನೀಡಿದೆ. ಇದು  2 ನೇ ಅವಧಿಯ 1 ನೇ ಹೆಜ್ಜೆ.

ಎಲ್ಲಾ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಲು ಹಾಗೂ 1 ಲಕ್ಷ ರೂ.ವರೆಗೆ ಬಡ್ಡಿರಹಿತ ಅಲ್ಪಾವಧಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲಗಳನ್ನು ನೀಡಲು ಉದ್ದೇಶಿಸಲಾಗಿದೆ. ಇನ್ನು  ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂ. ನೀಡುವುದನ್ನು ಎಲ್ಲ ರೈತರಿಗೂ ವಿಸ್ತರಿಸಲಾಗಿದೆ. ಈ ಮೊದಲು ಕಿಸಾನ್ ಯೋಜನೆಯು 2 ಹೆಕ್ಟೇರ್‌ವರೆಗೆ ಭೂಮಿಯುಳ್ಳ ರೈತರಿಗೆ ಮಾತ್ರ ಅನ್ವಯವಾಗುತ್ತಿತ್ತು.ಇದರಿಂದ ದೇಶದ ಸುಮಾರು 15 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಒಟ್ಟು ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಪೆನ್ಷನ್ ಯೋಜನಾ ಅಡಿ 18ರಿಂದ 40 ವರ್ಷದವರೆಗಿನ ನೋಂದಾಯಿತ ಸಣ್ಣ ಹಾಗೂ ಅತಿ ಸಣ್ಣ ರೈತರು 60 ವರ್ಷ ಕ್ರಮಿಸಿದ ಬಳಿಕ ಕನಿಷ್ಠ 3 ಸಾವಿರ ರೂ. ನಿಗದಿತ ಪಿಂಚಣಿ ಪಡೆದುಕೊಳ್ಳುವ ಯೋಜನೆ ಇದಾಗಿದೆ.

ಈ ಎರಡು ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಹಾಗೂ 2 ಕೋಟಿ ಅಧಿಕ ರೈತರನ್ನು ಸೇರಿಸಿಕೊಂಡು ಒಟ್ಟು 14.5 ಕೋಟಿ ಫಲಾನುಭವಿಗಳಾಗುತ್ತಾರೆ ಎಂದು ಅಂದಾಜಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

2 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

19 hours ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

24 hours ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago