ಬೆಂಗಳೂರು: ನರೇಂದ್ರ ಮೋದಿ ಸರಕಾರದ 2 ನೇ ಅವಧಿಯ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಕೊಡುಗೆ ನೀಡಿದೆ. ಇದು 2 ನೇ ಅವಧಿಯ 1 ನೇ ಹೆಜ್ಜೆ.
ಎಲ್ಲಾ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಲು ಹಾಗೂ 1 ಲಕ್ಷ ರೂ.ವರೆಗೆ ಬಡ್ಡಿರಹಿತ ಅಲ್ಪಾವಧಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲಗಳನ್ನು ನೀಡಲು ಉದ್ದೇಶಿಸಲಾಗಿದೆ. ಇನ್ನು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂ. ನೀಡುವುದನ್ನು ಎಲ್ಲ ರೈತರಿಗೂ ವಿಸ್ತರಿಸಲಾಗಿದೆ. ಈ ಮೊದಲು ಕಿಸಾನ್ ಯೋಜನೆಯು 2 ಹೆಕ್ಟೇರ್ವರೆಗೆ ಭೂಮಿಯುಳ್ಳ ರೈತರಿಗೆ ಮಾತ್ರ ಅನ್ವಯವಾಗುತ್ತಿತ್ತು.ಇದರಿಂದ ದೇಶದ ಸುಮಾರು 15 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಒಟ್ಟು ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಪೆನ್ಷನ್ ಯೋಜನಾ ಅಡಿ 18ರಿಂದ 40 ವರ್ಷದವರೆಗಿನ ನೋಂದಾಯಿತ ಸಣ್ಣ ಹಾಗೂ ಅತಿ ಸಣ್ಣ ರೈತರು 60 ವರ್ಷ ಕ್ರಮಿಸಿದ ಬಳಿಕ ಕನಿಷ್ಠ 3 ಸಾವಿರ ರೂ. ನಿಗದಿತ ಪಿಂಚಣಿ ಪಡೆದುಕೊಳ್ಳುವ ಯೋಜನೆ ಇದಾಗಿದೆ.
ಈ ಎರಡು ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಹಾಗೂ 2 ಕೋಟಿ ಅಧಿಕ ರೈತರನ್ನು ಸೇರಿಸಿಕೊಂಡು ಒಟ್ಟು 14.5 ಕೋಟಿ ಫಲಾನುಭವಿಗಳಾಗುತ್ತಾರೆ ಎಂದು ಅಂದಾಜಿಸಲಾಗಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…