ಸುಳ್ಯ: ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರೂ ರಸಗೊಬ್ಬರ ದರವನ್ನು ದುಪ್ಪಟ್ಟು ಏರಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ಸಾಧನೆ. ರೈತರ ಬಗ್ಗೆ ಸರಕಾರಕ್ಕೆ ನಿಜವಾದ ಕಾಳಜಿಯಿದ್ದರೆ ರಸಗೊಬ್ಬರಗಳ ದರ ಕಡಿಮೆ ಮಾಡಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಕರಾವಳಿ ಭಾಗದವರೇ ಆದ ರಸಗೊಬ್ಬರ ಸಚಿವರು ರೈತರಿಗೆ ಅತೀ ಅಗತ್ಯವಾಗಿರುವ ರಸಗೊಬ್ಬರವನ್ನು ಕಡಿಮೆ ದರದಲ್ಲಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿದೇಶಿ ಅಡಿಕೆ ಆಮದಾಗುತ್ತಿರುವ ಕಾರಣ ದೇಶದ ಅಡಿಕೆಗೆ ನಿರೀಕ್ಷಿತ ದರ ದೊರೆಯುತ್ತಾ ಇಲ್ಲ. ಅಡಕೆ ಬೆಲೆ ಕುಸಿತದಿಂದ, ಹಳದಿ ರೋಗದ ಬಾದೆಯಿಂದ ಅಡಿಕೆ ಕೃಷಿಕರು ಸಂಪೂರ್ಣ ಧೃತಿಗೆಟ್ಟಿದ್ದಾರೆ. ಆದುದರಿಂದ ಕರಾವಳಿಯ ಸಂಸದರು ಅಡಿಕೆ ಕೃಷಿಕರ ಸಮಸ್ಯೆಯ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯಂತೆ ರೈತರ ಖಾತೆಗೆ ಹಣ ಸಂದಾಯ ಆಗುತ್ತಾ ಇದ್ದರೂ ಹಣ ಬರುತ್ತಾ ಇಲ್ಲ ಎಂದು ಅಪಪ್ರಚಾರ ಮಾಡುವ ಬಿಜೆಪಿಗರಿಗೆ ಮನುಷ್ಯತ್ವ ಇಲ್ಲ ಎಂದು ಅವರು ಟೀಕಿಸಿದರು.
ರೈಲ್ವೇ, ಬಿ ಎಸ್ ಎನ್ ಎಲ್, ಆಸ್ಪತ್ರೆಗಳ ಖಾಸಗೀಕರಣ ಮಾಡುವ ಹುನ್ನಾರ ನಡೆಯುತಿದೆ. ಕಾಂಗ್ರೆಸ್ ಇದನ್ನು ವಿರೋಧಿಸಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ ನ.ಪಂ.ಸದಸ್ಯರಾದ ಬಾಲಕೃಷ್ಣ ಭಟ್ ಕೊಡೆಂಕೇರಿ, ಶರೀಫ್ ಕಂಠಿ, ಧೀರಾ ಕ್ರಾಸ್ತಾ , ಉಪಸ್ಥಿತರಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…