Advertisement
ಕೃಷಿ

ರೈತರಿಗೆ ಕಿಸಾನ್ ಕ್ರೆಡಿಟ್‍ಕಾರ್ಡ್ ವಿತರಣೆ

Share

ಮಂಗಳೂರು: ರೈತ ಬಾಂಧವರಿಗಾಗಿ ಕೇಂದ್ರ ಸರಕಾರ 2019ನೇ ಫೆಬ್ರವರಿ 01 ರಂದು ದೇಶದ ಆಯವ್ಯಯದಲ್ಲಿ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ’ಯನ್ನು ಘೋಷಣೆ ಮಾಡಿದೆ.

Advertisement
Advertisement
Advertisement
Advertisement
Advertisement

ಕೇಂದ್ರ ಸರಕಾರದ ಈ ಯೋಜನೆಯು ಒಂದು ವರ್ಷ ಪೊರೈಸುತ್ತಿರುವ ಈ ಸುಸಂದರ್ಭದಲ್ಲಿ, 2020ನೇ ಫೆಬ್ರವರಿ 24 ರ ಒಳಗೆ ಒಂದು ಕೋಟಿ ಕಿಸಾನ್ ಕ್ರೆಡಿಟ್‍ಕಾರ್ಡ್(ಬೆಳೆಸಾಲ)ಗಳನ್ನು ಸದರಿ ಯೋಜನೆಯ ಫಲಾನುಭವಿಗಳಿಗೆ ವಿತರಿಸಲು ಬ್ಯಾಂಕ್‍ಗಳಿಗೆ ನಿರ್ದೇಶಿಸಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿಯಲ್ಲಿ ದೇಶಾದ್ಯಂತ 9.22 ಕೋಟಿ ರೈತರು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ ಈಗಾಗಲೇ 6.76 ಕೋಟಿ ಫಲಾನುಭವಿಗಳು ಕಿಸಾನ್ ಕ್ರೆಡಿಟ್ ಕಾರ್ಡ್ (ಕೆ.ಸಿ.ಸಿ.) ಹೊಂದಿದ್ದು, 2.46 ಕೋಟಿ ಫಲಾನುಭವಿಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಬಾಕಿ ಇರುತ್ತಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 134165 ರೈತರು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿ ಮಾಡಿಕೊಂಡಿದ್ದು, 98988 ಫಲಾನುಭವಿಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುತ್ತಾರೆ. ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯದ ರೈತರು ತಮ್ಮ ಸೇವಾವಲಯದ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿ ಅತ್ಯಂತ ಕಡಿಮೆ ಬಡ್ಡಿ ದರದ ಈ ಬೆಳೆಸಾಲ (ಕೆ.ಸಿ.ಸಿ) ಸೌಲಭ್ಯವನ್ನು ಪಡೆಯಬಹುದಾಗಿದೆ.

ಜಿಲ್ಲೆಯ ಎಲ್ಲಾ ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ , ನಿಯಮಾನುಸಾರ ಬೆಳೆಸಾಲ (ಕೆ.ಸಿ.ಸಿ) ವಿತರಿಸಿ ಕೇಂದ್ರ ಸರಕಾರ 2020 ನೇ ಫೆಬ್ರವರಿ 24 ರವರೆಗೆ   ನಿಗದಿಪಡಿಸಿದ ಗುರಿಸಾಧನೆಗೆ ಜಿಲ್ಲೆಯಿಂದ ಅತಿ ಹೆಚ್ಚಿನ ಕೊಡುಗೆ ನೀಡಲು ನಿರ್ದೇಶಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

2 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

4 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago