ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ಘಟಕದ ಪದಾಧಿಕಾರಿಗಳು ರಾಜ್ಯ ಕರ್ಯದರ್ಶಿ ರವಿಕಿರಣ ಪುಣಚ ಅವರೊಂದಿಗೆ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಆಗಿ ಜಿಲ್ಲೆಯ ರೈತರ 19 ಬೇಡಿಕೆಗಳ ಮನವಿ ಮಾಡಲಾಯಿತು. ಜನವರಿ ತಿಂಗಳ ಮಧ್ಯದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದ್ದಾರೆ.
ಸುಳ್ಯ ತಾಲೂಕಿನ ರೈತರು ತಮ್ಮ ಸಮಸ್ಯೆ ಅಹವಾಲುಗಳನ್ನು ತಿಳಿಸಲು ಆ ದಿನ ಅವಕಾಶವಿರುತ್ತದೆ .
ಸಾಲಮನ್ನಾ ಜನವರಿ 10 ಒಳಗೆ ಎಲ್ಲಾ ರೈತರ ಖಾತೆಗಳಿಗೆ ಜಮಾಮಾಡಬೇಕು ಇಲ್ಲವಾದಲ್ಲಿ ಸಹಕಾರಿ ಸಂಘಗಳ ಆಡಳಿತ ಮಂಡಳಿ ಚುನಾವಣಾ ಬಹಿಸ್ಕರಿಸುತ್ತೇವೆ ಎಂಬ ರೈತರ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ . 15 ದಿನಗಳಲ್ಲಿ ಎಲ್ಲಾ ರೈತರಿಗೂ ಸಾಲ ಮನ್ನಾ ಹಣ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದು ರೈತ ಸಂಘದ ಪ್ರಕಟಣೆ ತಿಳಿಸಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…