Advertisement
ಸುದ್ದಿಗಳು

ರೈತರ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ದಾಖಲಾಗದೆ ಆಗುತ್ತಿರುವ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

Share

ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್‌ರಿಗೂ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

1 day ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

2 days ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 days ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

3 days ago