ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್ರಿಗೂ ನೀಡಿದ್ದಾರೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
View Comments
without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .