ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್ರಿಗೂ ನೀಡಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
View Comments
without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .