ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್ರಿಗೂ ನೀಡಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
View Comments
without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .