ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್ರಿಗೂ ನೀಡಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
View Comments
without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .