ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್ರಿಗೂ ನೀಡಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
View Comments
without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .