Advertisement
ಸುದ್ದಿಗಳು

ರೈತರ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ದಾಖಲಾಗದೆ ಆಗುತ್ತಿರುವ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

Share

ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್‌ರಿಗೂ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

10 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

10 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

11 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

19 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

19 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago