ರೈತರ ಸಾಲ ಮನ್ನಾ ಯೋಜನೆ : ಕೊಡಗಿಗೆ 32.64 ಕೋಟಿ ರೂ. ಬಿಡುಗಡೆ

September 16, 2019
3:00 PM

ಮಡಿಕೇರಿ: ಕೊಡಗು ಜಿಲ್ಲೆಯ ರೈತರಿಗೆ ಸಹಕಾರಿ ಸಾಲ ಮನ್ನಾ ಯೋಜನೆಯಡಿ ಹಿಂದಿನ ಸಮ್ಮಿಶ್ರ ಸರಕಾರ ಬಾಕಿ ಉಳಿಸಿಕೊಂಡಿದ್ದ ಸುಮಾರು 48.25 ಕೋಟಿ ರೂ.ಗಳ ಪೈಕಿ 32.64 ಕೋಟಿ ರೂ.ಗಳನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಇದೀಗ ಬಿಡುಗಡೆ ಮಾಡಿದೆ.

ಹಿಂದಿನ ಸಮ್ಮಿಶ್ರ ಸರಕಾರದ ಸಹಕಾರಿ ಸಾಲ ಮನ್ನಾ ಯೋಜನೆಯಡಿ ಕೊಡಗು ಜಿಲ್ಲೆಯ ಸಹಕಾರ ಸಂಘಗಳಲ್ಲಿ 2018ರ ಜು.10ಕ್ಕೆ ಅಲ್ಪಾವಧಿ ಬೆಳೆಸಾಲ ಪಡೆದು ಹೊರ ಬಾಕಿ ಉಳಿಸಿಕೊಂಡಿದ್ದ 32,903 ರೈತರ ಗರಿಷ್ಠ ತಲಾ ಒಂದು ಲಕ್ಷ ರೂ. ಸಾಲ ಮನ್ನಾದಂತೆ ಜಿಲ್ಲೆಗೆ 254.81 ಕೋಟಿ ರೂ.ಗಳನ್ನು ಸರಕಾರ ಬಿಡುಗಡೆ ಮಾಡಬೇಕಿತ್ತು.
ಈ ಕುರಿತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸೂಕ್ತ ದಾಖಲೆಗಳನ್ನು ಒದಗಿಸಿದ್ದರೂ, ಸರಕಾರ 16,673 ರೈತರ 116.71 ಕೋಟಿ ರೂ.ಗಳು ಮಾತ್ರ ಮನ್ನಾಕ್ಕೆ ಅರ್ಹವೆಂದು ಪರಿಗಣಿಸಿ ಈ ಪೈಕಿ 10,421 ರೈತರಿಗೆ 68.45 ಕೋಟಿ ರೂ.ಗಳನ್ನು ಮಾತ್ರ ಹಿಂದಿನ ಸರಕಾರ ಬಿಡುಗಡೆಗೊಳಿಸಿ ಉಳಿದ 6,252 ರೈತರ 48.25 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಬಾಕಿ ಉಳಿಸಿಕೊಂಡಿತ್ತು.

ಈ ಸಂಬಂಧ ಜಿಲ್ಲೆಯ ಎಲ್ಲಾ ರೈತರ ಪರವಾಗಿ ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ (ಬಾಂಡ್) ಅವರು ಸಹಕಾರ ಸಂಘಗಳ ವ್ಯಾಪ್ತಿಯ ಎಲ್ಲಾ 32,903 ಮಂದಿ ರೈತರ ಸಾಲ ಮನ್ನಾ ಮೊತ್ತವನ್ನು ಬಿಡುಗಡೆ ಮಾಡಿಸಿಕೊಡುವಂತೆ ಜಿಲ್ಲೆಯ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಅವರುಗಳಿಗೆ ಮನವಿ ಸಲ್ಲಿಸಿದ್ದರು.

ಇದಕ್ಕೆ ಸ್ಪಂದಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು, ಸಹಕಾರ ಕೇಂದ್ರ ಬ್ಯಾಂಕ್‍ನ ಬೇಡಿಕೆಯನ್ನು ವಿಶೇಷವಾಗಿ ಪರಿಗಣಿಸಿ, ಸಾಲ ಮನ್ನಾ ಯೋಜನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸಾಲ ಮನ್ನಾಕ್ಕೆ ಅರ್ಹತೆ ಪಡೆದಿರುವ ಜಿಲ್ಲೆಯ 16673 ಮಂದಿಯ ಪೈಕಿ ಈವರೆಗೆ ಬಿಡುಗಡೆಗೆ ಬಾಕಿ ಉಳಿಸಿಕೊಂಡಿದ್ದ 6252 ರೈತರ 48.25 ಕೋಟಿ ರೂ.ಗಳ ಪೈಕಿ 32.64 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಸಿದ್ದಾರೆ.

ಸೆ.13ರಂದೇ ಈ ಸಂಬಂಧ ಆದೇಶ ಹೊರಡಿಸಿದ ಮುಖ್ಯಮಂತ್ರಿಗಳು ತಕ್ಷಣ ರೈತರ ಫಲಾನುಭವಿ ರೈತರ ಖಾತೆ ಹಣ ಜಮಾ ಮಾಡುವಂತೆ ಸೂಚಿಸಿದ್ದಾರೆ. ಇದಕ್ಕಾಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಅವರು, ಮುಖ್ಯಮಂತ್ರಿ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರಿಗೆ ಜಿಲ್ಲೆಯ ರೈತರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಅಲ್ಲದೆ ಜಿಲ್ಲೆಯಲ್ಲಿನ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಬಾಕಿ ಇರುವ ಮೊತ್ತವನ್ನು ಸರಕಾರದ ಹಂತದಲ್ಲಿ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಬಿಡುಗಡೆಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಬಾಂಡ್ ಗಣಪತಿ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror