Advertisement
ಕೃಷಿ

ರೈತರ ಸಾಲ ಮನ್ನಾ ಯೋಜನೆ : ಕೊಡಗಿಗೆ 32.64 ಕೋಟಿ ರೂ. ಬಿಡುಗಡೆ

Share

ಮಡಿಕೇರಿ: ಕೊಡಗು ಜಿಲ್ಲೆಯ ರೈತರಿಗೆ ಸಹಕಾರಿ ಸಾಲ ಮನ್ನಾ ಯೋಜನೆಯಡಿ ಹಿಂದಿನ ಸಮ್ಮಿಶ್ರ ಸರಕಾರ ಬಾಕಿ ಉಳಿಸಿಕೊಂಡಿದ್ದ ಸುಮಾರು 48.25 ಕೋಟಿ ರೂ.ಗಳ ಪೈಕಿ 32.64 ಕೋಟಿ ರೂ.ಗಳನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಇದೀಗ ಬಿಡುಗಡೆ ಮಾಡಿದೆ.

ಹಿಂದಿನ ಸಮ್ಮಿಶ್ರ ಸರಕಾರದ ಸಹಕಾರಿ ಸಾಲ ಮನ್ನಾ ಯೋಜನೆಯಡಿ ಕೊಡಗು ಜಿಲ್ಲೆಯ ಸಹಕಾರ ಸಂಘಗಳಲ್ಲಿ 2018ರ ಜು.10ಕ್ಕೆ ಅಲ್ಪಾವಧಿ ಬೆಳೆಸಾಲ ಪಡೆದು ಹೊರ ಬಾಕಿ ಉಳಿಸಿಕೊಂಡಿದ್ದ 32,903 ರೈತರ ಗರಿಷ್ಠ ತಲಾ ಒಂದು ಲಕ್ಷ ರೂ. ಸಾಲ ಮನ್ನಾದಂತೆ ಜಿಲ್ಲೆಗೆ 254.81 ಕೋಟಿ ರೂ.ಗಳನ್ನು ಸರಕಾರ ಬಿಡುಗಡೆ ಮಾಡಬೇಕಿತ್ತು.
ಈ ಕುರಿತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸೂಕ್ತ ದಾಖಲೆಗಳನ್ನು ಒದಗಿಸಿದ್ದರೂ, ಸರಕಾರ 16,673 ರೈತರ 116.71 ಕೋಟಿ ರೂ.ಗಳು ಮಾತ್ರ ಮನ್ನಾಕ್ಕೆ ಅರ್ಹವೆಂದು ಪರಿಗಣಿಸಿ ಈ ಪೈಕಿ 10,421 ರೈತರಿಗೆ 68.45 ಕೋಟಿ ರೂ.ಗಳನ್ನು ಮಾತ್ರ ಹಿಂದಿನ ಸರಕಾರ ಬಿಡುಗಡೆಗೊಳಿಸಿ ಉಳಿದ 6,252 ರೈತರ 48.25 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಬಾಕಿ ಉಳಿಸಿಕೊಂಡಿತ್ತು.

ಈ ಸಂಬಂಧ ಜಿಲ್ಲೆಯ ಎಲ್ಲಾ ರೈತರ ಪರವಾಗಿ ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ (ಬಾಂಡ್) ಅವರು ಸಹಕಾರ ಸಂಘಗಳ ವ್ಯಾಪ್ತಿಯ ಎಲ್ಲಾ 32,903 ಮಂದಿ ರೈತರ ಸಾಲ ಮನ್ನಾ ಮೊತ್ತವನ್ನು ಬಿಡುಗಡೆ ಮಾಡಿಸಿಕೊಡುವಂತೆ ಜಿಲ್ಲೆಯ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಅವರುಗಳಿಗೆ ಮನವಿ ಸಲ್ಲಿಸಿದ್ದರು.

ಇದಕ್ಕೆ ಸ್ಪಂದಿಸಿದ ಶಾಸಕ ಕೆ.ಜಿ.ಬೋಪಯ್ಯ ಅವರು, ಸಹಕಾರ ಕೇಂದ್ರ ಬ್ಯಾಂಕ್‍ನ ಬೇಡಿಕೆಯನ್ನು ವಿಶೇಷವಾಗಿ ಪರಿಗಣಿಸಿ, ಸಾಲ ಮನ್ನಾ ಯೋಜನೆಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸಾಲ ಮನ್ನಾಕ್ಕೆ ಅರ್ಹತೆ ಪಡೆದಿರುವ ಜಿಲ್ಲೆಯ 16673 ಮಂದಿಯ ಪೈಕಿ ಈವರೆಗೆ ಬಿಡುಗಡೆಗೆ ಬಾಕಿ ಉಳಿಸಿಕೊಂಡಿದ್ದ 6252 ರೈತರ 48.25 ಕೋಟಿ ರೂ.ಗಳ ಪೈಕಿ 32.64 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಸಿದ್ದಾರೆ.

ಸೆ.13ರಂದೇ ಈ ಸಂಬಂಧ ಆದೇಶ ಹೊರಡಿಸಿದ ಮುಖ್ಯಮಂತ್ರಿಗಳು ತಕ್ಷಣ ರೈತರ ಫಲಾನುಭವಿ ರೈತರ ಖಾತೆ ಹಣ ಜಮಾ ಮಾಡುವಂತೆ ಸೂಚಿಸಿದ್ದಾರೆ. ಇದಕ್ಕಾಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಅವರು, ಮುಖ್ಯಮಂತ್ರಿ ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರಿಗೆ ಜಿಲ್ಲೆಯ ರೈತರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಅಲ್ಲದೆ ಜಿಲ್ಲೆಯಲ್ಲಿನ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಬಾಕಿ ಇರುವ ಮೊತ್ತವನ್ನು ಸರಕಾರದ ಹಂತದಲ್ಲಿ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಬಿಡುಗಡೆಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಬಾಂಡ್ ಗಣಪತಿ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

5 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

5 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

8 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

13 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

13 hours ago