ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…