ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಐವರ್ನಾಡು ಗ್ರಾಮ ಘಟಕದ ಕಚೇರಿ ಉದ್ಘಾಟನೆ ಡಿ.16 ರಂದು ನಡೆಯಿತು. ರೈತ ಸಂಘದ ತಾಲೂಕು ಘಟಕ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ರೈತ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ನೂಜಾಲು ಪದ್ಮನಾಭ ಸಭೆಯ ಅಧ್ಯಕ್ಷತೆ ವಹಿಸಿದ್ದರು .
ವೇದಿಕೆಯಲ್ಲಿ ಎಪಿಎಂಸಿ ಸದಸ್ಯರಾದ ನವೀನ ಸಾರಕೆರೆ, ರೈತ ಶ್ರಮಿಕರ ಸಹಕಾರಿ ಸಂಘದ ಅಶೋಕ್ ಎಡಮಲೆ, ಗೌರವ ಅಧ್ಯಕ್ಷ ಕೃಷ್ಣಪ್ಪ ನೆಕ್ರಾಪ್ಪಾಡಿ, ಖಜಾಂಜಿ ಭರತ್ ಕುಮಾರ್ ಐವರ್ನಾಡು ಭಾಗವಹಿಸಿದ್ದರು. ಡಿ. 17 ರಂದು ಮಂಗಳೂರಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸುಳ್ಯ ತಾಲುಕಿನ ಹೆಚ್ಚು ರೈತರು ಭಾಗವಹಿಸಬೇಕೆಂದು ರೈತ ಸಂಘದ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಹಾಗು ಇತರ 19 ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಯಲಿದೆ ಎಂದರು.
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…