ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಐವರ್ನಾಡು ಗ್ರಾಮ ಘಟಕದ ಕಚೇರಿ ಉದ್ಘಾಟನೆ ಡಿ.16 ರಂದು ನಡೆಯಿತು. ರೈತ ಸಂಘದ ತಾಲೂಕು ಘಟಕ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ರೈತ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ನೂಜಾಲು ಪದ್ಮನಾಭ ಸಭೆಯ ಅಧ್ಯಕ್ಷತೆ ವಹಿಸಿದ್ದರು .
ವೇದಿಕೆಯಲ್ಲಿ ಎಪಿಎಂಸಿ ಸದಸ್ಯರಾದ ನವೀನ ಸಾರಕೆರೆ, ರೈತ ಶ್ರಮಿಕರ ಸಹಕಾರಿ ಸಂಘದ ಅಶೋಕ್ ಎಡಮಲೆ, ಗೌರವ ಅಧ್ಯಕ್ಷ ಕೃಷ್ಣಪ್ಪ ನೆಕ್ರಾಪ್ಪಾಡಿ, ಖಜಾಂಜಿ ಭರತ್ ಕುಮಾರ್ ಐವರ್ನಾಡು ಭಾಗವಹಿಸಿದ್ದರು. ಡಿ. 17 ರಂದು ಮಂಗಳೂರಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸುಳ್ಯ ತಾಲುಕಿನ ಹೆಚ್ಚು ರೈತರು ಭಾಗವಹಿಸಬೇಕೆಂದು ರೈತ ಸಂಘದ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಹಾಗು ಇತರ 19 ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಯಲಿದೆ ಎಂದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…