ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಐವರ್ನಾಡು ಗ್ರಾಮ ಘಟಕದ ಕಚೇರಿ ಉದ್ಘಾಟನೆ ಡಿ.16 ರಂದು ನಡೆಯಿತು. ರೈತ ಸಂಘದ ತಾಲೂಕು ಘಟಕ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ರೈತ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ನೂಜಾಲು ಪದ್ಮನಾಭ ಸಭೆಯ ಅಧ್ಯಕ್ಷತೆ ವಹಿಸಿದ್ದರು .
ವೇದಿಕೆಯಲ್ಲಿ ಎಪಿಎಂಸಿ ಸದಸ್ಯರಾದ ನವೀನ ಸಾರಕೆರೆ, ರೈತ ಶ್ರಮಿಕರ ಸಹಕಾರಿ ಸಂಘದ ಅಶೋಕ್ ಎಡಮಲೆ, ಗೌರವ ಅಧ್ಯಕ್ಷ ಕೃಷ್ಣಪ್ಪ ನೆಕ್ರಾಪ್ಪಾಡಿ, ಖಜಾಂಜಿ ಭರತ್ ಕುಮಾರ್ ಐವರ್ನಾಡು ಭಾಗವಹಿಸಿದ್ದರು. ಡಿ. 17 ರಂದು ಮಂಗಳೂರಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸುಳ್ಯ ತಾಲುಕಿನ ಹೆಚ್ಚು ರೈತರು ಭಾಗವಹಿಸಬೇಕೆಂದು ರೈತ ಸಂಘದ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಹಾಗು ಇತರ 19 ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಯಲಿದೆ ಎಂದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…