Advertisement

ರೋಟರಿ ಕ್ಲಬ್ ಬೆಳ್ಳಾರೆ ಟೌನ್‍ನ ಅಧ್ಯಕ್ಷರಾಗಿ ಬಿ. ನರಸಿಂಹ ಜೋಶಿ

Share

ಬೆಳ್ಳಾರೆ:  2019-20ನೇ ಸಾಲಿನ ರೋಟರಿ ಕ್ಲಬ್ ಬೆಳ್ಳಾರೆ ಟೌನ್‍ನ ನೂತನ ಅಧ್ಯಕ್ಷರಾಗಿ ಬಿ. ನರಸಿಂಹಜೋಶಿ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಪಿ. ಎಸ್. ಆಯ್ಕೆಗೊಂಡಿರುತ್ತಾರೆ.

Advertisement
Advertisement

ಕ್ಲಬ್‍ನ ಉಪಾಧ್ಯಕ್ಷರಾಗಿ ಮೋನಪ್ಪ ಗೌಡ ತಂಬಿನಮಕ್ಕಿ, ನಿಕಟ ಪೂರ್ವ ಅಧ್ಯಕ್ಷರಾಗಿ ಎ. ಕೆ. ಮಣಿಯಾಣಿ, ನಿರ್ದೇಶಕರಾಗಿ ರವೀಂದ್ರ ಗೌಡ ಯಂ., ಬಿ. ಸುಬ್ರಹ್ಮಣ್ಯ ಜೋಶಿ, ಶ್ಯಾಮ ಸುಂದರ ರೈ, ಚಂದ್ರಶೇಖರ ರೈ, ನವೀನ್ ಕುಮಾರ್ ರೈ ತಂಬಿನಮಕ್ಕಿ ಆಯ್ಕೆಗೊಂಡಿರುತ್ತಾರೆ. ಇತರ ವಿಭಾಗಗಳಲ್ಲಿ ಪ್ರಮೋದ್ ಕೆ. ಕೆ., ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್‍ಕುಮಾರ್ ಕೆ. ಪವನ್ ವಿ., ಕರುಣಾಕರ ಆಳ್ವ, ಚಂದ್ರಹಾಸ ರೈ, ಸಾಯಿಪ್ರಸಾದ್ ರೈ ಹಾಗೂ ಐತ್ತಪ್ಪ ಗೌಡ ಆಯ್ಕೆಗೊಂಡಿರುತ್ತಾರೆ.

ಕ್ಲಬ್ಬಿನ 12ನೇ ವರ್ಷದ ಪದಗ್ರಹಣ ಸಮಾರಂಭವು ದೇವಿ ಹೈಟ್ಸ್ ಬೆಳ್ಳಾರೆಯಲ್ಲಿ ಜು.9 ರಂದು ಸಂಜೆ 6.30ಕ್ಕೆ ನೆರವೇರಲಿದ್ದು ಪದಗ್ರಹಣ ಅಧಿಕಾರಿಯಾಗಿ ರೋಟರಿ ಜಿಲ್ಲೆ 3181ರ ಮಾಜಿ ಜಿಲ್ಲಾ ಕಾರ್ಯದರ್ಶಿ ಹಾಗೂ ಲೆಕ್ಕ ಪರಿಶೋಧಕರಾದ ಯಂ. ಈಶ್ವರ ಭಟ್, ಮುಖ್ಯ ಅತಿಥಿಗಳಾಗಿ ಅಸಿಸ್ಟೆಂಟ್ ಗವರ್ನರ್ ಡಾ| ಪಿ. ಕೆ. ಕೇಶವ, ಝೋನಲ್ ಲೆಪ್ಟಿನೆಂಟ್ ಪ್ರಭಾಕರ ಆಳ್ವ ಭಜನಿಗುತ್ತು ಹಾಗೂ ಸುಳ್ಯ ಕ್ಲಬ್ಬಿನ ಅಧ್ಯಕ್ಷ ಡಾ| ಪುರುಷೋತ್ತಮ ಕೆ. ಜಿ. ಭಾಗವಹಿಸಲಿದ್ದಾರೆ.

ಸಾಮಾಜಿಕ ಮನ್ನಣೆ ಗಳಿಸಿದ ರೋಟರಿ ಬೆಳ್ಳಾರೆಯು ಈ ವರ್ಷದ ರೋಟರಿಯ ಜಿಲ್ಲಾ ಯೋಜನೆಗಳಾದ ಜೀವನ್ ಸಂಧ್ಯಾ, ಸೇವ್ ಲೈಫ್, ಕ್ಯಾನ್ಸರ್ ಹಾಗೂ ಇನ್ನಿತರ ಮಾರಕ ರೋಗಗಳ ಪತ್ತೆಗೆ ಕ್ರಮ ಹೀಗೆ ಹಲವು ಯೋಜನೆಗಳನ್ನು ಸಾಕಾರಗೊಳಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಬೆಳ್ಳಾರೆಯಲ್ಲಿ ಜವುಳಿ ಉದ್ಯಮ ಹೊಂದಿರುವ ನರಸಿಂಹ ಜೋಶಿಯವರು  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

14 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

14 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago