Advertisement

ರೋಟರಿ ಕ್ಲಬ್ ಬೆಳ್ಳಾರೆ ಟೌನ್‍ನ ಅಧ್ಯಕ್ಷರಾಗಿ ಬಿ. ನರಸಿಂಹ ಜೋಶಿ

Share

ಬೆಳ್ಳಾರೆ:  2019-20ನೇ ಸಾಲಿನ ರೋಟರಿ ಕ್ಲಬ್ ಬೆಳ್ಳಾರೆ ಟೌನ್‍ನ ನೂತನ ಅಧ್ಯಕ್ಷರಾಗಿ ಬಿ. ನರಸಿಂಹಜೋಶಿ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಪಿ. ಎಸ್. ಆಯ್ಕೆಗೊಂಡಿರುತ್ತಾರೆ.

ಕ್ಲಬ್‍ನ ಉಪಾಧ್ಯಕ್ಷರಾಗಿ ಮೋನಪ್ಪ ಗೌಡ ತಂಬಿನಮಕ್ಕಿ, ನಿಕಟ ಪೂರ್ವ ಅಧ್ಯಕ್ಷರಾಗಿ ಎ. ಕೆ. ಮಣಿಯಾಣಿ, ನಿರ್ದೇಶಕರಾಗಿ ರವೀಂದ್ರ ಗೌಡ ಯಂ., ಬಿ. ಸುಬ್ರಹ್ಮಣ್ಯ ಜೋಶಿ, ಶ್ಯಾಮ ಸುಂದರ ರೈ, ಚಂದ್ರಶೇಖರ ರೈ, ನವೀನ್ ಕುಮಾರ್ ರೈ ತಂಬಿನಮಕ್ಕಿ ಆಯ್ಕೆಗೊಂಡಿರುತ್ತಾರೆ. ಇತರ ವಿಭಾಗಗಳಲ್ಲಿ ಪ್ರಮೋದ್ ಕೆ. ಕೆ., ಪ್ರಭಾಕರ ಆಳ್ವ ಭಜನಿಗುತ್ತು, ವಿನಯ್‍ಕುಮಾರ್ ಕೆ. ಪವನ್ ವಿ., ಕರುಣಾಕರ ಆಳ್ವ, ಚಂದ್ರಹಾಸ ರೈ, ಸಾಯಿಪ್ರಸಾದ್ ರೈ ಹಾಗೂ ಐತ್ತಪ್ಪ ಗೌಡ ಆಯ್ಕೆಗೊಂಡಿರುತ್ತಾರೆ.

ಕ್ಲಬ್ಬಿನ 12ನೇ ವರ್ಷದ ಪದಗ್ರಹಣ ಸಮಾರಂಭವು ದೇವಿ ಹೈಟ್ಸ್ ಬೆಳ್ಳಾರೆಯಲ್ಲಿ ಜು.9 ರಂದು ಸಂಜೆ 6.30ಕ್ಕೆ ನೆರವೇರಲಿದ್ದು ಪದಗ್ರಹಣ ಅಧಿಕಾರಿಯಾಗಿ ರೋಟರಿ ಜಿಲ್ಲೆ 3181ರ ಮಾಜಿ ಜಿಲ್ಲಾ ಕಾರ್ಯದರ್ಶಿ ಹಾಗೂ ಲೆಕ್ಕ ಪರಿಶೋಧಕರಾದ ಯಂ. ಈಶ್ವರ ಭಟ್, ಮುಖ್ಯ ಅತಿಥಿಗಳಾಗಿ ಅಸಿಸ್ಟೆಂಟ್ ಗವರ್ನರ್ ಡಾ| ಪಿ. ಕೆ. ಕೇಶವ, ಝೋನಲ್ ಲೆಪ್ಟಿನೆಂಟ್ ಪ್ರಭಾಕರ ಆಳ್ವ ಭಜನಿಗುತ್ತು ಹಾಗೂ ಸುಳ್ಯ ಕ್ಲಬ್ಬಿನ ಅಧ್ಯಕ್ಷ ಡಾ| ಪುರುಷೋತ್ತಮ ಕೆ. ಜಿ. ಭಾಗವಹಿಸಲಿದ್ದಾರೆ.

ಸಾಮಾಜಿಕ ಮನ್ನಣೆ ಗಳಿಸಿದ ರೋಟರಿ ಬೆಳ್ಳಾರೆಯು ಈ ವರ್ಷದ ರೋಟರಿಯ ಜಿಲ್ಲಾ ಯೋಜನೆಗಳಾದ ಜೀವನ್ ಸಂಧ್ಯಾ, ಸೇವ್ ಲೈಫ್, ಕ್ಯಾನ್ಸರ್ ಹಾಗೂ ಇನ್ನಿತರ ಮಾರಕ ರೋಗಗಳ ಪತ್ತೆಗೆ ಕ್ರಮ ಹೀಗೆ ಹಲವು ಯೋಜನೆಗಳನ್ನು ಸಾಕಾರಗೊಳಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಬೆಳ್ಳಾರೆಯಲ್ಲಿ ಜವುಳಿ ಉದ್ಯಮ ಹೊಂದಿರುವ ನರಸಿಂಹ ಜೋಶಿಯವರು  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

13 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

13 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago