ಸುಳ್ಯ: ರೋಟರಿ ಕ್ಲಬ್ ಸುಳ್ಯ ಸಿಟಿ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ರೋಟರಿ ರೈಡರ್ ಮೇನಿಯಾ – 2019 ಬೈಕ್ ರ್ಯಾಲಿಯನ್ನು ಸೆ. 21, 22 ರಂದು ಆಯೋಜಿಸಲಾಯಿತು. ಫಾಸ್ಟ್ ಟ್ರಾಕ್ ನ ಆವರಣದಿಂದ ಆರಂಭಗೊಂಡ ಬೈಕ್ ರ್ಯಾಲಿಯನ್ನು ರೋಟರಿ ವಲಯ ಇದರ ಅಸಿಸ್ಟೆಂಟ್ ಗವರ್ನರ್ ರೊ. ಡಾ. ಕೇಶವ ಪಿ.ಕೆ. ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿ ಇದರ ಅಧ್ಯಕ್ಷ ರೊ. ಭಾನುಪ್ರಕಾಶ್, ಕಾರ್ಯದರ್ಶಿ ಗುರು ವಿಕ್ರಮ ಪ್ರಸಾದ್, ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷ ರೊ. ಡಾ. ಪುರುಷೋತ್ತಮ್, ಕಾರ್ಯದರ್ಶಿ ರೊ. ಸನತ್, ಕಾರ್ಯಕ್ರಮದ ಸಂಘಟಕರಾದ ರೊ. ಪ್ರೀತಮ್ ಡಿ.ಕೆ. ಮತ್ತು ಇನ್ನರ್ವ್ಹೀಲ್ ಅಧ್ಯಕ್ಷೆ ರೊ. ಡಾ. ಹರ್ಷಿತಾ ಪುರುಷೋತ್ತಮ ಉಪಸ್ಥಿತರಿದ್ದರು.
ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸುಮಾರು 26 ಮಂದಿ ಸದಸ್ಯರು ಈ ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಸುಳ್ಯದಿಂದ ಆರಂಭಗೊಂಡ ರ್ಯಾಲಿಯು ಸುಬ್ರಹ್ಮಣ್ಯ, ಬಿಸಿಲೆ, ಕೂಡುರಸ್ತೆ, ಬಾಚಳ್ಳಿ, ಅತ್ತಿಹಳ್ಳಿ, ಹೊಂಗದಹಳ್ಳ ಮಾರ್ಗವಾಗಿ ಪುನಃ ಸುಳ್ಯಕ್ಕೆ ಬಂದು ಕೊನೆಗೊಂಡಿತು.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…